ಮಂಗಳೂರು ತಾಲೂಕಲ್ಲಿ ಶಾಲೆ ಪಿಯು ಕಾಲೇಜು, ಬಂಟ್ವಾಳದಲ್ಲಿ ಶಾಲೆಗಳಿಗೆ ಇಂದು (ಜು. 19) ಶಾಲೆ ಪಿಯು ಕಾಲೇಜುಗಳಿಗೆ ರಜೆ
ಮಳೆಯ ಹಿನ್ನೆಲೆ ಮಂಗಳೂರು ತಾಲೂಕಿನ ಶಾಲೆ ಪಿಯು ಕಾಲೇಜುಗಳಿಗೆ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಎಲ್ಲಾ ಶಾಲೆಗಳಿಗೆ ಜು.19ರ ಶನಿವಾರ ರಜೆ ಘೋಷಿಸಲಾಗಿದೆ.
ಮಳೆಯ ಹಿನ್ನೆಲೆ ಮಂಗಳೂರು ತಾಲೂಕಿನ ಶಾಲೆ ಪಿಯು ಕಾಲೇಜುಗಳಿಗೆ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಎಲ್ಲಾ ಶಾಲೆಗಳಿಗೆ ಜು.19ರ ಶನಿವಾರ ರಜೆ ಘೋಷಿಸಲಾಗಿದೆ.
ಪೆರುವಾಯಿ, ಬಂಟ್ವಾಳ ತಾಲೂಕಿನ ವಿಟ್ಲ ಪೆರುವಾಯಿ ಸಮೀಪದ ಓಣಿಬಾಗಿಲು ಬಳಿ ರಸ್ತೆಗೆ ಗುಡ್ಡ ಕುಸಿತವಾಗಿದೆ. ಘಟನೆಯಲ್ಲಿ ರಸ್ತೆ ಬಂದ್ ಆಗಿ ಕೆಲವು ಸಮಯ ಸಂಚಾರ ಬಂದ್ ಆಗಿತ್ತು. ಪಕಳಕುಂಜದಿಂದ ಮಂಗಳೂರು, ಪುತ್ತೂರು ಹಾಗೂ ವಿಟ್ಲಕ್ಕೆ ತೆರಳುವ ಬಸ್ ಸಂಚಾರ ವ್ಯತ್ಯಯವಾಯಿತು. ಬೆಳ್ಳಂಬೆಳಗ್ಗೆ ಕೆಲಸಕ್ಕೆ ತೆರಳುವವರು ಪರದಾಡುವಂತಾಯಿತು. ಬಳಿಕ ಸ್ಥಳೀಯರ ಸಹಕಾರದಿಂದ ಅಲ್ಪ ಪ್ರಮಾಣದಲ್ಲಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.ಓಣಿಬಾಗಿಲು ಬಳಿ ಈ ಹಿಂದೆ ಅನೇಕ ಬಾರಿ ಗುಡ್ಡ ಕುಸಿದಿದ್ದು, ಶಾಶ್ವತ ಪರಿಹಾರ ಕೈಗೊಂಡಿಲ್ಲ.
ಮಂಗಳೂರು: ಭಾರೀ ಮಳೆ ಹಿನ್ನೆಲೆ ದ. ಕ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ (ಜುಲೈ 17) ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಮಂಗಳೂರು, ಜು. 16: ದ.ಕ. ಜಿಲ್ಲೆಯಲ್ಲಿ ಗುರುವಾರ ಶಾಲೆ, ಪಿಯು ಕಾಳೆಜುಗಳಿಗೆ ರಜೆ ಘೋಷಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು: ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ, ಮೂಲ್ಕಿ ತಾಲೂಕಿನ ಎಲ್ಲಾ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಜು.15ರಂದು(ಇಂದು) ರಜೆ ಘೋಷಿಸಿ ತಹಶೀಲ್ದಾರ್ ಆದೇಶ ನೀಡಿದ್ದಾರೆ.
ಮಂಗಳೂರು: ಭಾರೀ ಮಳೆಯ ಹಿನ್ನೆಲೆ ಜೂ.16 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ನಿನ್ನೆ ರಾತ್ರಿ ವೇಳೆಗೆ ನೀಡಿದ ಆದೇಶವನ್ನು ಮಾರ್ಪಡಿಸಿ ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಸುಳ್ಯ-ಪುತ್ತೂರು, ಬೆಳ್ತಂಗಡಿ ತಾಲೂಕನ್ನು ಹೊರತುಪಡಿಸಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು.ಇಂದು ಬೆಳಿಗ್ಗೆ ಈ ಆದೇಶವನ್ನು ಮಾರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ […]
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜೂ.12ರಂದು) ಉಡುಪಿ ಜಿಲ್ಲೆಯ ಎಲ್ಲಾ ಆಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯಿಸಲಿದೆ. ಗುರುವಾರದಿಂದ ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ […]
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ರಾತ್ರಿ […]
ಮಂಗಳೂರು: ಕಳೆದ 24 ತಾಸುಗಳಲ್ಲಿ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದೆ. ಇದೇ ಹವಾಮಾನ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆ (ಮೇ. 30)ಇಂದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.