Tag: vitla

DAKSHINA KANNADA HOME LATEST NEWS

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಇಬ್ಬರಿಗೆ ಗಾಯ

ವಿಟ್ಲ: ಇಬ್ಬರು ಐಟಿಐ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿ ಚೂರಿ ಇರಿತಗೊಂಡ ಘಟನೆ ವಿಟ್ಲದ ಐಟಿಐ ತರಗತಿ ಒಳಗಡೆ ಸಂಭವಿಸಿದೆ. ಚೂರಿ ಇರಿತದಿಂದ ಇಬ್ಬರು ಅಪ್ರಾಪ್ತರು ಗಾಯೊಂಡಿದ್ದಾರೆ, ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಥಮ ವರ್ಷದ ಎಲೆಕ್ಟಿಷಿಯನ್ ಐಟಿಐ ಕಲಿಯುತ್ತಿರುವ ಅಪ್ರಾಪ್ತ ಮತ್ತು ವಿಟ್ಲ ನಿವಾಸಿ ಹೇಮಂತ್ ಎಂಬವರ ನಡುವೆ ಜಗಳ ಉಂಟಾಗಿತ್ತು. ಬಳಿಕ ಹೇಮಂತ್ ಚೂರಿ ತಂದಿದ್ದು, ಅದರಿಂದ ಅಪ್ರಾಪ್ತನಿಗೆ ಇರಿದಿದ್ದಾನೆ. ಅದನ್ನು ತಡೆಯಲು ಬಂದ ಮತ್ತೋರ್ವ ವಿದ್ಯಾರ್ಥಿಗೂ ಗಾಯವಾಗಿದೆ. […]

DAKSHINA KANNADA HOME LATEST NEWS

ವಿಟ್ಲ: ರಸ್ತೆ ದಾಟುತ್ತಿದ್ದಾಗ ಮಹಿಳೆಗೆ ಬೈಕ್‌ ಢಿಕ್ಕಿಯಾಗಿ ಸಾವು- ಸವಾರ ಗಂಭೀರ

ವಿಟ್ಲ: ಪಾದಾಚಾರಿ ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. .ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.  

DAKSHINA KANNADA HOME LATEST NEWS

ವಿಟ್ಲ: ಹಿಟ್‌ ಆ್ಯಂಡ್‌ ರನ್‌ ಕೇಸ್‌ನ ಓಮ್ನಿ ಪತ್ತೆ

ವಿಟ್ಲ: ಕಳೆದ ಆದಿತ್ಯವಾರ ನಡೆದ ಹಿಟ್‌ ಆ್ಯಂಡ್‌ ರನ್‌ ಕೇಸ್‌ನಲ್ಲಿ ನಾಪತ್ತೆಯಾಗಿದ್ದ ಓಮ್ನಿ ವಾಹನ ಪತ್ತೆಯಾಗಿದೆ. ಕಳೆದ ಆದಿತ್ಯವಾರ ಸಾಲೆತ್ತೂರು-ವಿಟ್ಲ ರಸ್ತೆಯ ಕಡಂಬು ಎಂಬಲ್ಲಿ ವಿಟ್ಲದ ಕಡೆಗೆ ಹೋಗುತ್ತಿದ್ದ ಹೋಂಡಾ ಡಿಯೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಇದೇ ಓಮ್ನಿ ವಾಹನ ಕುಡ್ತಮುಗೇರು ಸಾಲೆತ್ತೂರು ಮಾರ್ಗವಾಗಿ ಮತ್ತೆ ಇಂದು ಪ್ರತ್ಯಕ್ಷವಾದ ವ್ಯಾನ್‌ ಸಾರ್ವಜನಿಕರ ಕಣ್ಣಿಗೆ ಬಿದ್ದಿದೆ. ಕೆ.ಎ.19ಎಮ್‌.ಹೆಚ್‌ 1518 ಮಾರುತಿ ವ್ಯಾನ್‌ ಪರಾರಿಯಾಗಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇಂದು ಈ ವ್ಯಾನ್‌ ಕಣ್ಣಿಗೆ ಕಾಣುತ್ತಿರುವಂತೇಯೇ ಗ್ರಾಮಸ್ಥರು ವ್ಯಾನನ್ನು […]

DAKSHINA KANNADA HOME LATEST NEWS

ವಿಟ್ಲ: ದ್ವಿಚಕ್ರ ವಾಹನಕ್ಕೆ ಗುದ್ದಿ ಓಮ್ನಿ ಪರಾರಿ- ಮಹಿಳೆಯರಿಬ್ಬರು ಗಂಭೀರ

ವಿಟ್ಲ: ದ್ವಿಚಕ್ರ ವಾಹನಕ್ಕೆ ಅತೀ ವೇಗದಿಂದ ಓಮ್ನಿಯೊಂದು ಹಿಂದಿನಿಂದ ಗುದ್ದಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಳಿಕೆ ಗ್ರಾಮದ ನಿವಾಸಿ ಜೆಸಿಂತಾ (31) ಹಾಗೂ ಪೆರುವಾಯಿ ಗ್ರಾಮದ ನಿವಾಸಿ ರೇಷ್ಮಾ ಎಂದು ಗುರುತಿಸಲಾಗಿದೆ. ಘಟನೆ ವಿವರ ಫೆ.1 ರಂದು ಕಾರ್ಯನಿಮಿತ್ತ ಇವರಿಬ್ಬರೂ ಹೋಂಡಾ ಡೀಯೋ ದ್ವಿಚಕ್ರ ವಾಹನದಲ್ಲಿ ಮುಡಿಪು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದರು. ಕಡಂಬು ಎಂಬಲ್ಲಿ ತಲುಪುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ಓಮ್ನಿಯೊಂದು […]

HOME LATEST NEWS

ವಿಟ್ಲ: ಕ್ರೈಸ್ತ ಶಿಕ್ಷಣ & ಮೌಲ್ಯ ಶಿಕ್ಷಣ ಪರೀಕ್ಷೆಯಲ್ಲಿ ಸಂತ ರೀಟಾ ಶಾಲೆಯ ರೆನಿಶಾ ಡಿಸೋಜ ಸಾಧನೆ

ವಿಟ್ಲ: ಮಂಗಳೂರು ಧರ್ಮಪ್ರಾಂತ್ಯದ ಮಂಗಳಜ್ಯೋತಿ ಇದರ ವತಿಯಿಂದ ನಡೆದ ಕ್ರೈಸ್ತ ಶಿಕ್ಷಣ ಹಾಗೂ ಮೌಲ್ಯ ಶಿಕ್ಷಣ ಪರೀಕ್ಷೆಯಲ್ಲಿ ವಿಟ್ಲದ ಸಂತ ರೀಟಾ ಶಾಲೆಯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. 10ನೇ ತರಗತಿಯವರಿಗೆ ನಡೆದ ಕ್ರೈಸ್ತ ಶಿಕ್ಷಣ ಹಾಗೂ ಮೌಲ್ಯ ಶಿಕ್ಷಣ ಪರೀಕ್ಷೆಯಲ್ಲಿ ಪೆರುವಾಯಿಯ ರಾಜೇಶ್‌ ಡಿಸೋಜ ಹಾಗೂ ರೆನಿಟಾ ರೊಡ್ರಿಗಸ್‌ ಇವರ ಮಗಳಾದ ರೆನಿಶಾ ಡಿಸೋಜ ಅವರು ಶೇ 100% ಫಲಿತಾಂಶವನ್ನು ಗಳಿಸಿ ಮಂಗಳೂರು ಧರ್ಮಪ್ರಾಂತ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮೌಲ್ಯ ಶಿಕ್ಷಣ ಪರೀಕ್ಷೆಯಲ್ಲಿ ಹಸೀಫಾ ಝಹೀಮ. ಬಿ […]

DAKSHINA KANNADA HOME LATEST NEWS

ವಿಟ್ಲ: ವಕೀಲರ ಮನೆಯಲ್ಲಿ ಕಳವು

ವಿಟ್ಲ: ಇಲ್ಲಿನ ಒಕ್ಕೆತ್ತೂರು ರೋಯಲ್ ವಿಲ್ಲಾ ಸಮೀಪ ವಕೀಲರೊಬ್ಬರ ಮನೆಯಲ್ಲಿ ಕಳವು ನಡೆದಿದೆ. ವಕೀಲೆ ಸಫಿಯಾ ನೌಫಲ್ ಅವರ ಮನೆಯಲ್ಲಿ ಘಟನೆ ನಡೆದಿದೆ. ಮನೆಮಂದಿ ಎಲ್ಲ ಒಂದು ತಿಂಗಳ ಹಿಂದೆ ವಿದೇಶಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯ ಒಳಗಡೆ ಇದ್ದ ಕಪಾಟನ್ನು ಹುಡುಕಾಟ ನಡೆಸಿ, ಅಲ್ಲಿ ಏನೂ ಸಿಗದ ಕಾರಣ ವಕೀಲರಿಗೆ ಸಂಬಂಧಪಟ್ಟ ಕೆಲ ದಾಖಲೆಗಳನ್ನು ಕೊಂಡೊಯ್ದಿದ್ದಾರೆ. ಈ ಘಟನೆ ಸ್ಥಳೀಯರ ಗಮನಕ್ಕೆ ಬಂದಿದ್ದು, ಅವರು ಮನೆಯವರಿಗೆ ಮಾಹಿತಿ […]

DAKSHINA KANNADA HOME LATEST NEWS

ವಿಟ್ಲ: ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್ ಮೂಡಿಗೆರೆಗೆ ಗಡಿಪಾರು

ವಿಟ್ಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್ ಯಾನೆ ಶೌಕತ್ ಎಂಬಾತನನ್ನು ಗಡಿಪಾರು ಮಾಡಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮ ನಿವಾಸಿ ಅಬ್ದುಲ್ ಖಾದರ್ ವಿರುದ್ಧ ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಏನ್ ಡಿ ಪಿ ಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿತ್ತು. ಈ ಪ್ರಕರಣಗಳ ದಾಖಲಾತಿ ಮೇಲೆ ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿ ಮಂಗಳೂರು ರವರು ದಕ್ಷಿಣ […]

DAKSHINA KANNADA HOME LATEST NEWS

ವಿಟ್ಲ: ಪೆರುವಾಯಿ ದನ ಕಳ್ಳನತದ ಆರೋಪಿ ಬಂಧನ- ಉಳಿದವರಿಗಾಗಿ ಶೋಧ

ವಿಟ್ಲ: ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ದನ ಕಳ್ಳತನ ಮಾಡಿದ ಆರೋಪದಲ್ಲಿ ಉಳ್ಳಾಲದ ಓರ್ವ ಆರೋಪಿಯನ್ನು ತಿಂಗಳ ಬಳಿಕ ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಝುಲ್ಫಾನ್ ಮಾಲಿಕ್ (30) ಬಂಧಿತ ಆರೋಪಿ. ಘಟನೆ ವಿವರ 18-11-2025 ರಂದು ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಅವರ 4 ದನಗಳು ಮೇಯುತ್ತಿದ್ದವು. ರಾತ್ರಿ ವೇಳೆ ಅಲ್ಲಿಯೇ ಮಲಗಿದ್ದ […]

DAKSHINA KANNADA HOME LATEST NEWS

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯಲ್ಲಿ ‘ಆಟಿದ ತಿರ್ಲ್’ ವಿನೂತನ ಕಾರ್ಯಕ್ರಮ

ಬಂಟ್ವಾಳ,ಆಗಸ್ಟ್ 1: ತಾಲೂಕಿನ ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯಲ್ಲಿ ಗುರುವಾರ “ಆಟಿದ ತಿರ್ಲ್” ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕ ವಂದನೀಯ ಐವನ್ ಮೈಕಲ್ ರೋಡ್ರಿಗಸ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕ ವಂದನೀಯ ಅಮಿತ್ ಪ್ರಕಾಶ್ ರೋಡ್ರಿಗಸ್ ಮಾತನಾಡಿ, ತುಳುನಾಡಿನ ವಿಶೇಷತೆ ಕುರಿತು ಅರಿವು ಮೂಡಿಸಿದರು. ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಶ್ವೇತಾ ಪಾಯ್ಸ್, ಧರ್ಮ ಭಗಿನಿಯರಾದ ಮರಿನಾ ಹಾಗೂ ಜಾನೆಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತುಳುನಾಡಿನ ವಿಶೇಷತೆಯನ್ನು ಹಾಡು, ನೃತ್ಯ, ಪ್ರದರ್ಶನ, ಔಷಧೀಯ ಸಸ್ಯಗಳ ವಿವರಿಸುವ […]

DAKSHINA KANNADA HOME LATEST NEWS

ವಿಟ್ಲ: ವಾಹನ ದಟ್ಟನೆ ನಿಯಂತ್ರಿಸಲು ಫ್ಲೆಕ್ಸ್ ಮತ್ತು ತಳ್ಳುಗಾಡಿ ತೆರವು

ವಿಟ್ಲ: ವಿಟ್ಲ ಪೇಟೆಯಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆ ನಿಯಂತ್ರಿಸಲು ಇಲ್ಲಿನ ಪಟ್ಟಣ ಪಂಚಾಯತ್ ಅಧಿಕಾರಿಗಳು ವಾಹನ ದಟ್ಟನೆಗೆ ಕಾರಣವಾಗುತ್ತಿದ್ದ ಫ್ಲೆಕ್ಸ್ ಮತ್ತು ತಳ್ಳುಗಾಡಿಗಳನ್ನು ತೆರವುಗೊಳಿಸಿದರು. ವಿಟ್ಲ ಪೇಟೆಯಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆಯನ್ನು ನಿಯಂತ್ರಿಸುವ ಉದ್ದೇಶದಿಂದ ಶನಿವಾರ ಪಟ್ಟಣ ಪಂಚಾಯತ್ ವತಿಯಿಂದ ಪೊಲೀಸ್, ಇಲಾಖೆ ಮತ್ತು ವಾಹನ ಚಾಲಕ ಸಭೆ ಕರೆಯಲಾಗಿತ್ತು. ಈ ವೇಳೆ ಈ ಹಿಂದೆ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಮುಂದುವರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಅಳವಡಿಸಲಾಗಿದ್ದ ಪ್ರಚಾರದ ಫ್ಲೆಕ್ಸ್ […]