ರಾಜ್ಯಾದ್ಯಂತ ಎ.2ರವರೆಗೆ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು: ರಾಜ್ಯಾದ್ಯಂತ ಎ.2ರವರೆಗೆ ಒಣ ಹವೆ, ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೀದರ್ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ತಿಳಿಸಿದೆ. […]


