Tag: ಕೆನರಾಟಿವಿ ನ್ಯೂಸ್‌

COMMUNITY NEWS

ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ಫಾದರ್ ಐವನ್ ಮೈಕಲ್ ರೊಡ್ರಿಗಸ್ ನೇಮಕ

ಮಂಗಳೂರು : ಮಂಗಳೂರಿನ ಐತಿಹಾಸಿಕ ಮಿಲಾಗ್ರಿಸ್ ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರು ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕ ಗೊಂಡಿದ್ದಾರೆ. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ವಂದನೀಯ ಡಾ. ಪೀಟರ್ ಪಾಲ್ ಸಲ್ಡಾನ್ಹಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ ಅವರಿಂದ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರು ಜೂನ್ 1ರಂದು ಅಧಿಕೃತವಾಗಿ […]

LATEST NEWS

ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆ: ಸಂಸದ ಕ್ಯಾ. ಚೌಟ ಸಲಹೆಗೆ ಜಿಲ್ಲಾಡಳಿತದ ಗಂಭೀರ ಪರಿಗಣನೆ

ಮಂಗಳೂರು: ಮಂಗಳೂರು ನಗರದ ಕೆಲವು ಪ್ರಮುಖ ಸಿಟಿ ಬಸ್ ಮಾರ್ಗಗಳ ಬದಲಾವಣೆ ಮತ್ತು ವಿಸ್ತರಣೆಯ ಅಗತ್ಯತೆ ಕುರಿತು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದಿರುವ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಯು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಮುಂಬರುವ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (RTA) ಸಭೆಯಲ್ಲಿ ತುರ್ತಾಗಿ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಕೋರಿ ಅಪರ ಜಿಲ್ಲಾಧಿಕಾರಿಗಳು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದೆ. ಇದರೊಂದಿಗೆ, ಮಂಗಳೂರು ನಗರದ ಭೌಗೋಳಿಕ ಮತ್ತು ಜನಸಂಖ್ಯಾ […]

LATEST NEWS

ಜೆ. ಕೊರಗಪ್ಪ ಅವರಿಗೆ ಪ್ರತಿಷ್ಠಿತ ‘ಸೇವಾ ತ್ರಿವಿಕ್ರಮ’ ಬಿರುದು ಪ್ರದಾನ

ಮಂಗಳೂರು : ರಿಯಲ್‌ ಎಸ್ಟೇಟ್‌ ಸಂಸ್ಥೆ ಲ್ಯಾಂಡ್ ಲಿಂಕ್ಸ್ ರೂವಾರಿ, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್ ಅವರ ಮುಂದಾಳತ್ವದಲ್ಲಿ ಮೇರಿಹಿಲ್‌ನಲ್ಲಿ ನಿರ್ಮಾಣಗೊಂಡ ಪಾಲೆಮಾರ್ ಕನ್ವೆಷನ್ ಸೆಂಟರ್ ಸಹಿತ ನಾಲ್ಕು ಸಭಾಂಗಣಗಳ ಲೋಕಾರ್ಪಣೆ ಸಮಾರಂಭ ನಡೆದ ವೇಳೆ ಕೃಷ್ಣ ಪಾಲೆಮಾರ್ ಅವರ ನಿಕಟವರ್ತಿ ಜೆ. ಕೊರಗಪ್ಪ ಅವರಿಗೆ ಆಂಧ್ರ ಪ್ರದೇಶದ ಗೌರವಾನ್ವಿತ ರಾಜ್ಯಪಾಲ, ಜಸ್ಟೀಸ್ ಎಸ್ ಅಬ್ದುಲ್ ನಝೀರ್ ಅವರ ದಿವ್ಯಹಸ್ತದಲ್ಲಿ ಸೇವಾ ತ್ರಿವಿಕ್ರಮ ಬಿರುದು ನೀಡಿ ಗೌರವಾಭಿನಂದನ ಪತ್ರ ಸಲ್ಲಿಸಲಾಯಿತು. ದೇರೆಬೈಲ್‌ ಕೊಂಚಾಡಿಯ ವಿದ್ಯಾ ಆಂಗ್ಲ […]

LATEST NEWS

ಬಂಟ ಸಮಾಜ ಪ್ರವರ್ಗ 3 (ಬಿ) ಯಲ್ಲಿ ಸೇರಿರುವುದರಿಂದ ಸೌಲಭ್ಯಗಳಿಂದ ವಂಚಿತವಾಗಿದೆ: ಕೆ ಅಜಿತ್ ಕುಮಾರ್ ರೈ ಮಾಲಾಡಿ

ಮಂಗಳೂರು: ಬಂಟ ಸಮಾಜವನ್ನು ಕೇಂದ್ರ ಸರಕಾರವು ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಲ್ಲ, ರಾಜ್ಯದ ಮೀಸಲಾತಿ ಪಟ್ಟಿಯಲ್ಲಿ ಬಂಟ ಸಮಾಜವನ್ನು ಪ್ರವರ್ಗ 2 (ಎ) ಯಲ್ಲಿ ಸೇರಲು ಅರ್ಹವಾಗಿದ್ದರೂ ಬಂಟ ಸಮುದಾಯವನ್ನು ಪ್ರವರ್ಗ 3 (ಬಿ) ಯಲ್ಲಿ ಸೇರಿಸಿರುವ ಕಾರಣ ಬಂಟರು ಶಿಕ್ಷಣ, ಉದ್ಯೋಗ, ಸಾಮಾಜಿಕ, ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಸಿಗುವ ಸೌಲಭ್ಯಗಳಿಂದ ವಂಚಿತವಾಗಿ ಬಂಟ ಸಮುದಾಯಕ್ಕೆ ತುಂಬಾ ಹಿನ್ನಡೆಯಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ […]

LATEST NEWS

ಬಿಜೆಪಿ ಮುಖಂಡ ಈಶ್ವರ್ ಭಟ್ ರಾಕೋಡಿ ಕಾಂಗ್ರೆಸ್ ಸೇರ್ಪಡೆ

ಬಂಟ್ವಾಳ:ಬೋಳಂತೂರು ಪರಿಸರದಲ್ಲಿ ಕಳೆದ 50 ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಹಾಗೂ ವಿವಿಧ ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದ ಹಿರಿಯ ಮುಖಂಡ ಶ್ರೀ ಈಶ್ವರ್ ಭಟ್ ರಾಕೋಡಿ ಅವರು ಬಿಜೆಪಿ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಶ್ರೀ ಈಶ್ವರ್ ಭಟ್ ಅವರು ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಹಾಗೂ ಶಾಲನ್ನು ಧರಿಸುವ ಮೂಲಕ ಪಕ್ಷದ ಸಿದ್ದಾಂತ ಮತ್ತು ಕಾರ್ಯನಿಷ್ಠೆಯನ್ನು ಒಪ್ಪಿ ಕಾಂಗ್ರೆಸ್ ಸೇರಿದರು. ಬೋಳಂತೂರಿನ […]

LATEST NEWS

ಬಿಕರ್ನಕಟ್ಟೆ ನಾಗಬ್ರಹ್ಮ ದೈವಸ್ಥಾನದ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ

ಮಂಗಳೂರು, ಮೇ 28:ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ಕದ್ರಿ ಶಿವಭಾಗ್ ವಾರ್ಡಿನ ಬಿಕರ್ನಕಟ್ಟೆ ನಾಗಬ್ರಹ್ಮ ದೈವಸ್ಥಾನದ ಹತ್ತಿರ ಲೋಕೋಪಯೋಗಿ ಇಲಾಖೆಯ ರೂ. 30 ಲಕ್ಷ ವಿಶೇಷ ಅನುದಾನದಲ್ಲಿ ನಡೆಯಲಿರುವ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿತು. ಬಳಿಕ ಮಾತನಾಡಿದ ಶಾಸಕರು, “ಮಳೆಗಾಲದಲ್ಲಿ ಈ ಪ್ರದೇಶಕ್ಕೆ ತೊಂದರೆ ಉಂಟಾಗುತ್ತಿದ್ದ ಬಗ್ಗೆ ಸ್ಥಳೀಯರು ಮನವಿ ಮಾಡಿದ್ದರು. ಅವರ ಕೋರಿಕೆಯಂತೆ ಪದವು ಮೇಗಿನ ಮನೆ ನಾಯ್ಗರ ಮನೆತನದ ರಸ್ತೆಗೆ ತಾಗಿರುವ ರಾಜಕಾಲುವೆಗೆ […]

LATEST NEWS

ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಸೌಹಾರ್ದಯುತ ಈದುಲ್ ಅಳ್ಹಾ (ಬಕ್ರೀದ್) ಆಚರಣೆ

ಮಂಗಳೂರು, ಮೇ 28: ಬಜಾಲ್ ನಂತೂರಿನ ಬದ್ರಿಯಾ ಜುಮಾ ಮಸೀದಿ ಮತ್ತು ಹಯತುಲ್ ಇಸ್ಲಾಂ ಮದರಸದ ಆಶ್ರಯದಲ್ಲಿ ಈದುಲ್ ಅಳ್ಹಾ (ಬಕ್ರೀದ್) ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿ ಹಾಗೂ ಸೌಹಾರ್ದತೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಖತೀಬರಾದ ಅಬ್ದುಲ್ ನಾಸಿರ್ ಸಅದಿ ಅವರು, “ಯಾರೂ ಯಾರೊಂದಿಗೂ ದ್ವೇಷ ಸಾಧಿಸದೆ, ಪರಸ್ಪರ ಕಚ್ಚಾಡದೆ ಒಗ್ಗಟ್ಟಿನಿಂದ ಬಾಳಬೇಕು. ಎಂತಹದ್ದೇ ಕಠಿಣ ಪರಿಸ್ಥಿತಿಗಳು ಎದುರಾದರೂ ಅಲ್ಲಾಹನು ನೀಡಿದ ಅನುಗ್ರಹಗಳನ್ನು ಮರೆಯದೆ ಕೃತಜ್ಞತೆ ಸಲ್ಲಿಸಬೇಕು. ಸದಾ ಕಾಲ ದೇವನಿಗೆ ತಲೆಬಾಗಿ ಇಹಪರ […]

LATEST NEWS

ಮಂಗಳೂರಿನ ಯುವತಿ ನಿಶೆಲ್ ನೌಕಾಪಡೆಯ ಸಬ್ ಲೆಫ್ಟಿನೆಂಟ್ ಆಗಿ ನೇಮಕ

ಮಂಗಳೂರು, ಮೇ 27 : ಕರಾವಳಿ ಮೂಲದ ಯುವತಿ ನಿಶೆಲ್ ಫ್ಲೋರಾ ಅಲ್ಮೆಡಾ ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಹುದ್ದೆಗೆ ನೇಮಕಗೊಳ್ಳುವ ಮೂಲಕ ದೇಶ ಸೇವೆಗೆ ಮುಂದಾಗಿದ್ದಾರೆ. ಮಂಗಳೂರಿನ ಕುಲಶೇಖರದ ಕೊಂಗೂರು ನಿವಾಸಿ ನವೀನ್ ಅಲ್ಮೆಡಾ ಹಾಗೂ ಕ್ರಿಸ್ ಎವರ್ಟ್ ಡಿಸೋಜಾ ಅವರು, ಪ್ರತಿಷ್ಠಿತ ಸರ್ವೀಸಸ್ ಸೆಲೆಕ್ಷನ್ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸೇನಾ ತರಬೇತಿ ಪೂರ್ಣಗೊಳಿಸಿ ಈ ಸಾಧನೆ ಮಾಡಿದ್ದಾರೆ. ಸಂತ ಅಲೋಶಿಯಸ್ ನಲ್ಲಿ ಪಿಯುಸಿ ವರೆಗಿನ ಶಿಕ್ಷಣ ಮುಗಿಸಿದ ಬಳಿಕ ಬೆಂಗಳೂರಿನಲ್ಲಿ ಏರೋನಾಟಿಕಲ್ ಎಂಜಿನಿಯರಿಂಗ್ ಪದವಿ […]

COMMUNITY NEWS

ಜೆಪ್ಪು ಚರ್ಚ್ ಮತ್ತು ಎಸ್‌ವಿಪಿ ಘಟಕದಿಂದ ನಿರ್ಗತಿಕ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಮಂಗಳೂರು ಮೇ 27: ಜುಬಿಲಿ ವರ್ಷದ ಅಂಗವಾಗಿ ಜೆಪ್ಪು ಸಂತ ಜೋಸೆಫರ ಚರ್ಚ್ ಮತ್ತು ಅಲ್ಲಿನ ಸಂತ ವಿನ್ಸೆಂಟ್ ಡಿ ಪಾಲ್ (SVP) ಘಟಕದ ವತಿಯಿಂದ, ಪ್ರಧಾನ ಧರ್ಮಗುರುಗಳಾದ ವಂದನೀಯ ಫಾದರ್ ಮ್ಯಾಕ್ಸಿಮ್ ಡಿಸೋಜ ಅವರ ನೇತೃತ್ವದಲ್ಲಿ ಅರ್ಹ ಬಡ ಕುಟುಂಬವೊಂದಕ್ಕೆ ನಿರ್ಮಿಸಿಕೊಡಲಾದ ನೂತನ ಮನೆಯನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಮೇ 19 ರಂದು ಅತ್ಯಂತ ಸಡಗರ ಮತ್ತು ಕೃತಜ್ಞತಾ ಭಾವದ ವಾತಾವರಣದಲ್ಲಿ ಈ ನೂತನ ಗೃಹದ ಆಶೀರ್ವಚನ ಕಾರ್ಯಕ್ರಮ ನೆರವೇರಿತು. ಬಳಿಕ ಮನೆಯನ್ನು ಫಲಾನುಭವಿಗಳಾದ ಶ್ರೀ ಜೊಸ್ಸಿ […]

LATEST NEWS

ಪ್ರಧಾನಿ ಮೋದಿ ಫೋಟೋ ದುರ್ಬಳಕೆ: ಡಾ. ಲಕ್ಷ್ಮೀಕಾಂತ್ ಸಿಂಗೆ ವಿರುದ್ಧ ಬರ್ಕೆ ಠಾಣೆಯಲ್ಲಿ FIR ದಾಖಲು

ಮಂಗಳೂರು. ಮೇ 27: ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಫೋಟೋವನ್ನು ದುರ್ಬಳಕೆ ಮಾಡಿ, ಫೇಸ್‌ಬುಕ್‌ನಲ್ಲಿ ಎಡಿಟ್ ಮಾಡಿದ ಚಿತ್ರಗಳೊಂದಿಗೆ ಸುಳ್ಳು ಸುದ್ದಿ ಪ್ರಚಾರ ಮಾಡಿದ ಆರೋಪದ ಮೇಲೆ ಡಾ. ಲಕ್ಷ್ಮೀಕಾಂತ್ ಸಿಂಗೆ ಎಂಬ ವ್ಯಕ್ತಿಯ ವಿರುದ್ಧ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾನೂನು ಪ್ರಕೋಷ್ಟದ ವತಿಯಿಂದ ನೀಡಲಾದ ಈ ದೂರಿನನ್ವಯ, ಆರೋಪಿಯ ವಿರುದ್ಧ ಬರ್ಕೆ ಠಾಣೆಯಲ್ಲಿ FIR ಸಂಖ್ಯೆ: 56/2026, ಕಲಂ 79 ಮತ್ತು […]