ಪ್ರತಿ ತಾಲೂಕಿನಲ್ಲಿ ಬೀದಿನಾಯಿಗಳ ಆಶ್ರಯ ಕೇಂದ್ರ: ಜಿಲ್ಲಾಧಿಕಾರಿ
ಮಂಗಳೂರು:- ಬೀದಿ ನಾಯಿಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೀದಿನಾಯಿಗಳ ಆಶ್ರಯ ತಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮಂಗಳೂರು ತಾಲೂಕಿನಲ್ಲಿ ಇಂತಹ ಆಶ್ರಯ ಕೇಂದ್ರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ಗಳಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳ ಜನನ ನಿಯಂತ್ರಣ […]











