Tag: ಕೆನರಾಟಿವಿ ನ್ಯೂಸ್‌

LATEST NEWS

ಬಿ.ಸಿ. ರೋಡ್ ರಿಕ್ಷಾ ಚಾಲಕರ ನಿಲ್ದಾಣ ಸಮಸ್ಯೆ ಬಗೆಹರಿಸಲು ಮಾಜಿ ಸಚಿವ ಬಿ. ರಮಾನಾಥ ರೈ ಭರವಸೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖ ಕೇಂದ್ರವಾದ ಬಿ.ಸಿ. ರೋಡ್‌ನ ರಿಕ್ಷಾ ಚಾಲಕರ ನಿಲ್ದಾಣದ ಸಮಸ್ಯೆಗೆ ಸಂಬಂಧಿಸಿದಂತೆ, ರಿಕ್ಷಾ ಚಾಲಕರ ನಿಯೋಗವು ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಚಾಲಕರು ತಮಗೆ ಎದುರಾಗುತ್ತಿರುವ ಪ್ರಮುಖ ಸಮಸ್ಯೆಗಳನ್ನು ಮಾಜಿ ಸಚಿವರ ಗಮನಕ್ಕೆ ತಂದರು. ಸೂಕ್ತ ರಿಕ್ಷಾ ನಿಲ್ದಾಣದ ಕೊರತೆಯಿಂದಾಗಿ ಚಾಲಕರು ದೈನಂದಿನ ವೃತ್ತಿ ನಿರ್ವಹಣೆಯಲ್ಲಿ ಪಡುತ್ತಿರುವ ಕಷ್ಟಗಳು, ಇದರಿಂದ ಪ್ರಯಾಣಿಕರಿಗೆ ಉಂಟಾಗುತ್ತಿರುವ ಅಸೌಕರ್ಯ ಹಾಗೂ […]

LATEST NEWS

ಕರಾವಳಿ ಕರ್ನಾಟಕದ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು: ಸ್ವಾಮಿ ಜಿತಕಾಮಾನಂದಜಿ

ಮಂಗಳೂರು, ಜೂನ್ 28: ಕರಾವಳಿ ಕರ್ನಾಟಕದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಎಂಬ ತಪ್ಪು ಭಾವನೆಯನ್ನು ಬಿಟ್ಟು, ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಪರೀಕ್ಷೆಗಳನ್ನು ಎದುರಿಸಬೇಕು ಎಂದು ಮಂಗಳೂರು ರಾಮಕೃಷ್ಣ ಮಿಷನ್‌ನ ಸ್ವಾಮಿ ಜಿತಕಾಮಾನಂದಜಿ ಕರೆ ನೀಡಿದ್ದಾರೆ. ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ಮಂಗಳೂರು ಐಎಎಸ್ ಸಂಸ್ಥೆಯು ರಾಮಕೃಷ್ಣ ಮಿಷನ್ ಸಹಯೋಗದೊಂದಿಗೆ ಮಂಗಳಾದೇವಿಯ ರಾಮಕೃಷ್ಣ ಮಿಷನ್‌ನಲ್ಲಿ ಆಯೋಜಿಸಿದ್ದ “ಮಾರ್ಗದರ್ಶಿ – ಕ್ರ್ಯಾಕಿಂಗ್ ದಿ ಯುಪಿಎಸ್ಸಿ ಎಕ್ಸಾಮಿನೇಷನ್” ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೃಢ […]

LATEST NEWS

ನಿಡ್ಡೋಡಿ ಸಂತ ತೆರೆಜಮ್ಮನವರ ಚರ್ಚ್‌ನಲ್ಲಿ ಪರಿಸರ ದಿನಾಚರಣೆ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ವಂ| ಲಿಯೋ ವಿಲಿಯಂ ಲೋಬೊ

ಮೂಡಬಿದ್ರೆ, ಜೂನ್ 28:ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಭಾನುವಾರ ದಂದು ಬೆಳಗಿನ ಪೂಜೆಯ ನಂತರ ಪರಿಸರ ಸಂರಕ್ಷಣಾ ದಿನಾಚರಣೆ ಹಾಗೂ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ನಿಡ್ಡೋಡಿ ಘಟಕದ ನೇತೃತ್ವದಲ್ಲಿ, ಪರಿಸರ ಆಯೋಗ ಹಾಗೂ ಐ.ಸಿ.ವೈ.ಎಂ (ICYM) ನಿಡ್ಡೋಡಿ ಘಟಕದ ಜಂಟಿ ಆಶ್ರಯದಲ್ಲಿ ಈ ಸಮಾಜಮುಖಿ ಕಾರ್ಯಕ್ರಮ ವನ್ನು ಆಯೋಜಿಸಲಾಯಿತು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಚರ್ಚಿನ ಧರ್ಮಗುರುಗಳಾದ ವಂದನೀಯ ಲಿಯೋ ವಿಲಿಯಂ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ […]

LATEST NEWS

ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪಕಲಾ ಶಿಬಿರ ಸಮಾರೋಪ; ಸಾಂಪ್ರದಾಯಿಕ ಕಲೆಗಳ ರಕ್ಷಣೆಗೆ ವಿನ್ಸೆಂಟ್‌ ಕುಟಿನ್ಹಾ ಕರೆ

ಮಂಗಳೂರು: “ನೂರಾರು ವರ್ಷಗಳ ಹಿಂದೆ ನಿರ್ಮಿಸಲಾದ ಪ್ರಾಚೀನ ಶಿಲ್ಪಗಳು ಮತ್ತು ಗುಹಾಚಿತ್ರಗಳು ಇಂದಿಗೂ ಜನರೊಂದಿಗೆ ಸಂವಹನ ನಡೆಸುತ್ತಿವೆ. ಇದು ನಮ್ಮ ಕರಕುಶಲತೆಯ ಅಜರಾಮರ ಮೌಲ್ಯವನ್ನು ಸಾಬೀತುಪಡಿಸುತ್ತದೆ. ಆಧುನಿಕ ಜಗತ್ತಿನಲ್ಲಿ ಕಲೆಯ ಸ್ವರೂಪ ಬದಲಾಗುತ್ತಿದ್ದರೂ, ಕಲಾವಿದರನ್ನು ಪ್ರೋತ್ಸಾಹಿಸುವ ಮತ್ತು ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ರಕ್ಷಿಸುವ ತುರ್ತು ಅಗತ್ಯವಿದೆ” ಎಂದು ಪ್ರೊವಿಟ್‌ ಫುಡ್ಸ್‌ ಪ್ರೈ.ಲಿ. ಮಾಲಕ ಹಾಗೂ ಕಲಾಭಿಮಾನಿ ವಿನ್ಸೆಂಟ್ ಕುಟಿನ್ಹಾ ಕರೆ ನೀಡಿದರು. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಮತ್ತು […]

LATEST NEWS

ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಅತ್ಯಾಧುನಿಕ ವಿಡಿಯೋ ಕಾನ್ಫರೆನ್ಸ್ ಹಾಲ್ ಸೇರ್ಪಡೆ

ಮಂಗಳೂರು: ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ವ್ಯವಸ್ಥೆಯ ಸೊಬಗಿಗೆ ಇಂದು ಮತ್ತೊಂದು ಆಕರ್ಷಣೀಯ ಆಧುನಿಕ ಸೌಲಭ್ಯದ ಸೇರ್ಪಡೆ.ಈಗಾಗಲೇ ಲಯನ್ಸ್ ಕ್ಲಬ್ ಇಂಟರ್ನೇಶನಲ್ ಸಂಸ್ಥೆಯ ವತಿಯಿಂದ ಅಂದಿನ ಲಯನ್ಸ್ ಗವರ್ನರ್ ಆಗಿದ್ದ ಲಯನ್ ವಸಂತ್ ಶೆಟ್ಟಿಯವರಿಂದ ಅನುದಾನಿತಗೊಳಿಸಲ್ಪಟ್ಟು ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಕೊಡುಗೆಯಾಗಿ ಬಂದಂತಹ ವಿಡಿಯೋ ಕಾನ್ಫರೆನ್ಸ್ ಹಾಲ್ ಮತ್ತೊಂದಿಷ್ಟು ಬೆಳವಣಿಗೆಯೊಂದಿಗೆ ಅಂದದ ಸ್ವರೂಪವನ್ನು ಪಡೆದುಕೊಂಡ ರಮಣೀಯ ದೃಶ್ಯ. ಉನ್ನತ ಮಟ್ಟದ ಸಭೆಗಳನ್ನು ನಡೆಸಲು ಅನುಕೂಲವಾಗುವಂತೆ ಸುಮಾರು ಹದಿಮೂರು ಮೈಕ್ರೋಫೋನ್ ಗಳ ಅಳವಡಿಕೆ,ಹೈ ಸ್ಟ್ಯಾಂಡರ್ಡ್ amplifier ಹಾಗೂ ಪೂರಕ ವ್ಯವಸ್ಥೆಗಳನ್ನು […]

LATEST NEWS

ಕಸ ವಿಂಗಡಣೆ ಪ್ರತಿ ನಾಗರಿಕನ ಜವಾಬ್ದಾರಿ: ಬಜಾಲ್‌ನಲ್ಲಿ ಸ್ವಚ್ಛತಾ ಜಾಗೃತಿ ಜಾಥಾ ಉದ್ಘಾಟಿಸಿ ಅಬ್ದುಲ್ ರವೂಫ್ ಕರೆ

ಮಂಗಳೂರು: ಸ್ವಚ್ಛ ಪರಿಸರ ನಿರ್ಮಾಣವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಂದು ಮನೆಯಲ್ಲೂ ಹಸಿಕಸ ಮತ್ತು ಒಣಕಸವನ್ನು ಸಮರ್ಪಕವಾಗಿ ವಿಂಗಡಿಸಿ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವ ಮೂಲಕ ಸ್ವಚ್ಛ ನಗರ ನಿರ್ಮಾಣಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಹಾಗೂ ಬದ್ರಿ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ರವೂಫ್ ಕರೆ ನೀಡಿದ್ದಾರೆ. ಅವರು ಬಜಾಲ್ ನಂತೂರಿನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಬಜಾಲ್ ನಂತೂರ್ ಫೈಸಲ್ ನಗರದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ‘ಸ್ವಚ್ಛತಾ ಹಿ […]

HOME LATEST NEWS

ಮೈಸೂರು ದಸರಾದಲ್ಲಿ ಕಂಬಳ ಸಂಭ್ರಮ: ಅಕ್ಟೋಬರ್ 18, 19 ರಂದು ಐತಿಹಾಸಿಕ ಕ್ರೀಡೆಗೆ ಮುಹೂರ್ತ ನಿಗದಿ

ಮೈಸೂರು : ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಅದ್ಧೂರಿ ಕಂಬಳ ಕ್ರೀಡೆಯನ್ನು ಆಯೋಜಿಸಲು ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ. ಅಕ್ಟೋಬರ್ 18 ಮತ್ತು 19 ರಂದು (ಭಾನುವಾರ ಮತ್ತು ಸೋಮವಾರ) ಎರಡು ದಿನಗಳ ಕಾಲ ಮೈಸೂರಿನಲ್ಲಿ ಕಂಬಳ ಜರುಗಲಿದೆ ಎಂದು ಕಂಬಳದ ರುವಾರಿ ಹಾಗೂ ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಥಮ ಪೂರ್ವಭಾವಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ […]

LATEST NEWS

ಜನರ ಸೇವೆಗಾಗಿ ಅಧಿಕಾರದ ಬಳಕೆ ಅಭಿನಂದನೆ ಸ್ವೀಕರಿಸಿ ನೂತನ ವಿ.ಪ. ಸದಸ್ಯ ಪಿ.ವಿ. ಮೋಹನ್

ಮಂಗಳೂರು,: ಜನಸೇವೆಗೆ ಅಧಿಕಾರ ಅತ್ಯಗತ್ಯ. ನನಗೆ ದೊರೆತಿರುವ ಈ ಅಧಿಕಾರವನ್ನು ಜನರ ಕಲ್ಯಾಣಕ್ಕಾಗಿ ಮತ್ತು ಅವರ ಕೆಲಸಗಳಿಗಾಗಿ ಬಳಸುತ್ತೇನೆಯೇ ಹೊರತು ವೈಯಕ್ತಿಕ ಹಿತಾಸಕ್ತಿಗಲ್ಲ” ಎಂದು ನೂತನ ವಿಧಾನಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ರಾಜಕೀಯ ಆದರ್ಶಗಳ ಹಾದಿ: “ನಾನು ಆಸ್ಕರ್ ಫರ್ನಾಂಡಿಸ್, ಜನಾರ್ದನ ಪೂಜಾರಿ ಮತ್ತು ವೀರಪ್ಪ ಮೊಯ್ಲಿ ಅವರಂತಹ ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ರಾಜಕೀಯ ಆದರ್ಶಗಳನ್ನು ಪಾಲಿಸುತ್ತಾ […]

LATEST NEWS

ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಸ್ಮರಣಾರ್ಥ ದತ್ತಿನಿಧಿ ವಿತರಣೆ: ಎಜು ಕಾರುಣ್ಯ ಟ್ರಸ್ಟ್ ಕಾರ್ಯ ಶ್ಲಾಘನೀಯ – ಪ್ರಶಾಂತ್ ಕಾಜವ

ಮಂಗಳೂರು: ಜೂನ್,26 :ಪ್ರಾಮಾಣಿಕ, ನೇರ ಮತ್ತು ನಿಷ್ಠುರ ಪತ್ರಕರ್ತರಾಗಿದ್ದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೇಪುಣಿಯವರ ಸ್ಮರಣಾರ್ಥ ದತ್ತಿ ನಿಧಿ ಯೋಜನೆ ಆರಂಭಿಸಿರುವ ಎಜು ಕಾರುಣ್ಯ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ಸಮಾಜಕ್ಕೆ ಪ್ರೇರಣಾದಾಯಿ ಎಂದು ನರಿಂಗಾನ ಕಂಬಳೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕಾಜವ ಶ್ಲಾಘಿಸಿದರು. ಮಂಗಳೂರಿನ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ಆಯೋಜಿಸಿದ್ದ ದತ್ತಿನಿಧಿ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. […]

HOME LATEST NEWS STATE

ನನಗೂ‌ ಡಿಕೆಶಿಗೂ ಯಾವುದೇ ವ್ಯವಹಾರಿಕ ಸಂಬಂಧವಿಲ್ಲ ಧರ್ಮಸ್ಥಳದಲ್ಲಿ ಬಿ.ವೈ. ವಿಜಯೇಂದ್ರ

ಮಂಗಳೂರು, ಧರ್ಮಸ್ಥಳ ಜೂನ್ 26: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಡಮತದಾನದ ಹಿಂದೆ ತಾವಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಯಾವುದೇ ವ್ಯವಹಾರಿಕ ಅಥವಾ ಆತ್ಮೀಯ ಸಂಬಂಧವಿದೆ ಎಂಬ ಆರೋಪವನ್ನು ವಿಜಯೇಂದ್ರ ಇದೇ ವೇಳೆ ತಳ್ಳಿಹಾಕಿದರು. ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದೇನೆ. ಅಲ್ಲಿಂದ ಮಂಗಳೂರಿಗೆ ಆಗಮಿಸಿ ಧರ್ಮಸ್ಥಳದಲ್ಲಿ ದೇವರ […]