Tag: ಕೆನರಾಟಿವಿ

DAKSHINA KANNADA HOME LATEST NEWS

ಸುಳ್ಯ : ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಸುಳ್ಯ : ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ […]

HOME

MCC ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

ಮಂಗಳೂರು: ಎಂ.ಸಿ.ಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯು ಡಿ.೪ ರಂದು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜಾ ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು. ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ […]

HOME NATIONAL

SDPI ಹೆಸರಿನಲ್ಲಿ ನಿಷೇಧಿತ PFIನ ಹಿಂಬಾಗಿಲ ರಾಜಕೀಯ ಪ್ರವೇಶ: ಸಂಸತ್ತಿನಲ್ಲಿ ಕ್ಯಾ. ಚೌಟ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. […]

COMMUNITY NEWS DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರ ಮೋಂತಿ ಹಬ್ಬದ ಸಂಭ್ರಮ

ಮಂಗಳೂರು: ಕರಾವಳಿಯಾದ್ಯಂತ ಕಥೋಲಿಕ ಕ್ರೈಸ್ತರು ಮೋಂತಿ (ಮೇರಿ ಮಾತೆ) ಹಬ್ಬವನ್ನು ಸಡಗರದಿಂದ ಆಚರಿಸಿದರು. ತೆನೆ ಹಬ್ಬವೆಂದು ಕರೆಯುವ ಈ ಹಬ್ಬದ ದಿನವಾದ ಇಂದು ಹೊಸ ತೆನೆಯ ಆರ್ಶಿವಾದ, ವಿಶೇಷ ಬಲಿಪೂಜೆ ನಡೆಯಿತು. ಈ ಹಬ್ಬಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ನಡೆಯಿತು. ಮಕ್ಕಳು 9 ದಿನಗಳ ಕಾಲ ತಮ್ಮ ಹಿತ್ತಲಲ್ಲಿ ಸಿಕ್ಕ ಹೂಗಳನ್ನು ಚರ್ಚಿಗೆ ತಂದು ಮೇರಿ ಮಾತೆಗೆ ಅರ್ಪಿಸುತ್ತಾರೆ. ಈ ವೇಳೆ ಮಕ್ಕಳಿಗೆ ಸಿಹಿತಿನಿಸುಗಳನ್ನು ಹಂಚುತ್ತಾರೆ.ಕೊನೆಯ ದಿನವಾದ ಇಂದು ಎಲ್ಲರ ಮನೆಗಳಲ್ಲಿ ಕುಟುಂಬ ಸಮೇತ ಸಸ್ಯಹಾರಿ […]

DAKSHINA KANNADA HOME

ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮತಗಳ್ಳತನ ವಿರುದ್ಧ ಪಂಜಿನ ಮೆರವಣಿಗೆ

ಮಂಗಳೂರು: ಮತಗಳ್ಳತನ‌ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಪ್ರತಿಭಟನಾ ಸಭೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ವೇತೃತ್ವದಲ್ಲಿ ನಡೆಯಿತು. ಮಂಗಳೂರಿನ ನವಭಾರತ್ ಸರ್ಕಲ್ ನಿಂದ ಲಾಲ್‌ಭಾಗ್ ವರೆಗೆ ನಡೆದ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಮತಗಳ್ಳತನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಚಿವ […]

DAKSHINA KANNADA HOME LATEST NEWS

ಮಂಗಳೂರು:  ಆ. 31ರಂದು ಕಲ್ಲಚ್ಚು ಪ್ರಶಸ್ತಿ ಪ್ರದಾನ

ಮಂಗಳೂರು:  ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ” ಕಲ್ಲಚ್ಚು ಪ್ರಕಾಶನದ” 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಅಗಸ್ಟ್ 31 ಭಾನುವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಲಿದೆ. ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್ ಎಮ್ ಶಿವಪ್ರಕಾಶ್, ಜಬೀವುಲ್ಲಾ ಎಂ […]

DAKSHINA KANNADA HOME

ರಿಕ್ಷಾ ಚಾಲಕರ ಜೊತೆ ಸಮಾಲೋಚಿಸದೆ ಸಿಟಿ ಬಸ್ ಗೆ ಚಾಲನೆ ಬೇಡ: ಅಶೋಕ್ ರೈ

ಪುತ್ತೂರು: ಪುತ್ತೂರು ನಗರದ ರಿಕ್ಷಾ ಚಾಲಕ ಮಾಲಕರ ಎಲ್ಲಾ ಸಂಘದವರ ಜೊತೆ ಸಮಾಲೋಚನೆ ಮಾಡಿ, ಅವರನ್ನು ಕರೆಸಿ ಮಾತುಕತೆ ನಡೆಸಿದ ಬಳಿಕವೇ ಪುತ್ತೂರು ನಗರದಲ್ಲಿ ಸಿಟಿ ಬಸ್ ಗೆ ಚಾಲನೆ ನೀಡಬೇಕು ಎಂದು ಶಾಸಕರಾದ ಅಶೋಕ್ ರೈ ಅವರು ಕರ್ನಾಟಕ ಸಾರಿಗೆ ನಿಗಮದ ಡಿ ಸಿ ಅಮಲಿಂಗಯ್ಯ ಹೊಸಪೂಜಾರಿಯವರಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಶಾಸಕರ ಕಚೇರಿಯಲ್ಲಿ ಅಧಿಕಾರಿ ಜೊತೆ ಚರ್ಚೆ ನಡೆಸಿದ ಶಾಸಕರು ಪುತ್ತೂರು ಕೆಎಸ್ ಆರ್ ಟಿಸಿ ವಿಭಾಗದಲ್ಲಿ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಚರ್ಚೆ […]

DAKSHINA KANNADA HOME LATEST NEWS

ಮಂಗಳೂರು: ಟ್ರಾಫಿಕ್‌ ಫೈನ್‌ ಮೇಲೆ 50% ರಿಯಾಯಿತಿ- ಸೆ.12ರವರೆಗೆ ಮಾತ್ರ

ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದ ವಾಹನಿಗರಿಗೆ ಪ್ರಕರಣಗಳ ಇತ್ಯರ್ಥ ಪಡಿಸಿಕೊಳ್ಳುವುದಕ್ಕಾಗಿ ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಸಲು ಆ.23ರಿಂದ ಸೆ.12ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ (ಎಎಸ್‌ಐ-ಪಿಐ ಡಿವೈಸ್) ಲಾಲ್‌ಬಾಗ್‌ನಲ್ಲಿರುವ ಮನಪಾ ಕಮಾಂಡ್ ಕಂಟ್ರೋಲ್ ಸೆಂಟರ್‌ಗಳಲ್ಲಿ ಪಾವತಿಸಬಹುದು. ಉಳಿದಂತೆ ಕದ್ರಿಯ ಪೂರ್ವ ಸಂಚಾರ ಠಾಣೆ, ಪಾಂಡೇಶ್ವರದ ಪಶ್ಚಿಮ ಸಂಚಾರ ಠಾಣೆ, ಬೈಕಂಪಾಡಿಯ ಮಂಗಳೂರು ಉತ್ತರ ಠಾಣೆ, ಜಪ್ಪಿನಮೊಗರಿನ ದಕ್ಷಿಣ ಸಂಚಾರ ಠಾಣೆ […]

DAKSHINA KANNADA LATEST NEWS

ಲಕ್ಕಿ ಸ್ಕೀಂ- 13 ಸಾವಿರ ಮಂದಿಗೆ 15 ಕೋ.ರೂ ವಂಚನೆ: ನಾಲ್ವರ ಬಂಧನ

ಮಂಗಳೂರು: ಸುರತ್ಕಲ್‌ ವ್ಯಾಪ್ತಿಯಲ್ಲಿ ಲಕ್ಕಿ ಸ್ಕೀಮ್‌ಗಳ ಮೂಲಕ ಗ್ರಾಹಕರಿಗೆ ನಾನಾ ರೀತಿಯ ಬಹುಮಾನಗಳ ಆಮಿಷ ತೋರಿಸಿ 15ಸಾವಿರ ಮಂದಿಗೆ 15ಕೋಟಿ ರೂ.ಗೂ ಮಿಕ್ಕಿ ಹಣ ಸಂಗ್ರಹ ಮಾಡಿ ಬಳಿಕ ವಂಚನೆಗೈದ ಪ್ರತ್ಯೇಕ ಎರಡು ಪ್ರಕರಣದಲ್ಲಿ ನಾಲ್ವರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ನ್ಯೂ ಶೈನ್‌ ಎಂಟರ್‌ ಪ್ರೈಸಸ್‌ ಎಂಬ ಲಕ್ಕಿ ಸ್ಕೀಮ್‌ನಲ್ಲಿವಂಚನೆ ಮಾಡಿದ್ದ ಕಾಟಿಪಳ್ಳ ಒಂದನೇ ಬ್ಲಾಕ್‌ನ ಮಹಾಕಾಳಿ ದೈವಸ್ಥಾನದ ಬಳಿಯ ನಿವಾಸಿ ಅಹಮ್ಮದ್‌ ಖುರೇಶಿ (34), ಕಾಟಿಪಳ್ಳ ಎರಡನೇ ಬ್ಲಾಕ್‌ನ ಕೋರ್ದಬ್ಬು ದ್ವಾರದ ನಝೀರ್‌ ನಾಸೀರ್‌ (39) ಹಾಗೂ […]

LATEST NEWS

ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿ.ಜೆ.ಪಿ ಬದುಕು – ಬರಹ: ರಾಷ್ಟ್ರ‍ೀಯ ವಿಚಾರ ಸಂಕಿರಣ

ಮಂಗಳೂರು: ಖ್ಯಾತ ಕೊಂಕಣಿ ಸಾಹಿತಿ ವಿ.ಜೆ.ಪಿ. ಸಲ್ಡಾನ್ಹಾ ಜನ್ಮಶತಾಬ್ದಿಯ ಪ್ರಯುಕ್ತ ಸಾಹಿತ್ಯ ಅಕಾಡೆಮಿ, ಹೊಸದೆಹಲಿ, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲ್ಯದ ಕೊಂಕಣಿ ಸಂಸ್ಥೆ – ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಸಹಯೋಗದೊಂದಿಗೆ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಹಾಲ್‌ನಲ್ಲಿ ವಿ.ಜೆ.ಪಿ ಬದುಕು – ಬರಹದ ಬಗ್ಗೆ ಆಗಸ್ಟ್ 13, 14 ರಂದು ಎರಡು ದಿನಗಳ ರಾಷ್ಟ್ರ‍ೀಯ ವಿಚಾರ ಸಂಕಿರಣ ಆಯೋಜಿಸಿಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆ ಆ.12 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಇದೇ […]