Tag: ಕೆನರಾಟಿವಿ

DAKSHINA KANNADA HOME LATEST NEWS

ಕಾಲೇಜಿಗೆ ಹೋಗುತ್ತಿದ್ದ ಯುವಕ ನಾಪತ್ತೆ

ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕಾಲೇಜಿನಲ್ಲಿ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಬಿಹಾರ ಮೂಲದ ಸುಧಾಂಶುಕುಮಾರ (21 ) ಎಂಬವರು ಕಾಣೆಯಾಗಿದ್ದಾರೆ. `ಕಾಣೆಯಾದವರ ಚಹರೆ : ಸುಮಾರು 5.6 ಅಡಿ, ಸಾಧಾರಣ ಶರೀರ, ಗೋದಿ ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಕೆಂಪು ಬಣ್ಣದ ಟಿ ಶರ್ಟ್, ಬರ್ಮುಡ ಪ್ಯಾಂಟ್ ಧರಿಸಿದ್ದರು. ಹಿಂದಿ, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಪಣಂಬೂರು ಪೆÇಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

HOME LATEST NEWS

ಮಧೂರು ಮದನಂತೇಶ್ವರ ವಿನಾಯಕ ದೇವಾಲಯದಲ್ಲಿ ಏ.5ರಂದು ಮೂಡಪ್ಪ ಸೇವೆ

ಕಾಸರಗೋಡು: ಮಧೂರು ಮದನಂತೇಶ್ವರ ವಿನಾಯಕ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿದ್ದು, ಏ.5ರಂದು ಮೂಡಪ್ಪ ಸೇವೆ ನಡೆಯಲಿದೆ. ತಂತ್ರಿ ಉಳಿಯತ್ತಾಯ ವಿಷ್ಣು ಆಸ್ರ ಅವರ ನೇತೃತ್ವದಲ್ಲಿ ಗುರುವಾರ ಸಿದ್ಧತೆ ನಡೆದಿದೆ. ದೀಪದ ಬಲಿ, ದರ್ಶನ ಬಲಿ, ಶತರುದ್ರಾಭಿಷೇಕ, 128 ತೆಂಗಿನಕಾಯಿ ಅಷ್ಟದ್ರವ್ಯ ಮಹಾಗಣಪತಿ ಯಾಗ, ಮೂಡಪ್ಪ ಸೇವೆಯ ದ್ರವ್ಯಗಳ ಆಗಮನ, ದ್ರವ್ಯ ಪೂಜೆ ನಡೆದಿವೆ. ಪ್ರಧಾನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ರಾಮಕೃಷ್ಣ ಕಾಟುಕುಕ್ಕೆ ಬಳಗದಿಂದ ದಾಸಭಕ್ತಿ ಸಂಕೀರ್ತನೆ, ಬದಿಯಡ್ಕ ವಾಣಿಪ್ರಸಾದ್ ಅವರಿಂದ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು.‌  

HOME LATEST NEWS NATIONAL

ಪತಿ ಮುಂದೆಯೇ ಸಾಮೂಹಿಕ ಅ*ತ್ಯಾಚಾರ ಪ್ರಕರಣ: 8 ಮಂದಿಗೆ ಜೀವಾವಧಿ ಶಿಕ್ಷೆ

ಮಧ್ಯಪ್ರದೇಶ: ನವವಿವಾಹಿತೆಯನ್ನು ಆಕೆಯ ಪತಿಯೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ 8 ಅಪರಾಧಿಗಳಿಗೆ ಮಧ್ಯಪ್ರದೇಶದ ರೇವಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ತಲಾ ₹2,30,000 ದಂಡ ಹಾಕಿದೆ. ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಪದ್ಮಾ ಜಾಧವ್ ಅವರು ಎಂಟು ಆರೋಪಿಗಳಾದ ರಾಮಕಿಶನ್, ಗರುಡ್ ಕೋರಿ, ರಾಕೇಶ್ ಗುಪ್ತಾ, ಸುಶೀಲ್ ಕೋರಿ, ರಜನೀಶ್ ಕೋರಿ, ದೀಪಕ್ ಕೋರಿ, ರಾಜೇಂದ್ರ ಕೋರಿ ಮತ್ತು ಲವ್‌ಕುಶ್ ಕೋರಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ ಎಂದು ಪಿಟಿಐ […]

DAKSHINA KANNADA HOME LATEST NEWS STATE

ಬೆಳ್ತಂಗಡಿ: NIA ಜೊತೆ ಕರ್ತವ್ಯ ನಿರ್ವಹಿಸಿದ್ದ ಪೊಲೀಸ್ ಹೆಡ್ ಕಾನ್ಟೇಬಲ್‌ಗೆ ಮುಖ್ಯಮಂತ್ರಿ ಪದಕ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಎಪ್ರಿಲ್ 2 ರಂದು ಕರ್ನಾಟಕ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗರ ಪ್ರಥಮ ಪುತ್ರ […]

DAKSHINA KANNADA HOME LATEST NEWS

ಮಂಗಳೂರು: ಅಡಿಕೆ ವ್ಯಾಪಾರಿಯಿಂದ 29 ಲಕ್ಷ ರೂ. ವಂಚನೆ

ಮಂಗಳೂರು: ಅಡಿಕೆ ವ್ಯಾಪಾರಿಯೊಬ್ಬ ಸಹಕಾರಿ ಸಂಘವೊಂದಕ್ಕೆ 29 ಲಕ್ಷ ರೂ. ಮೋಸ ಮಾಡಿದ ಬಗ್ಗೆ ಮಂಗಳೂರು ನಗರ ಹೊರವಲಯದ ಪಣಂಬೂರು  ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಬೈಕಂಪಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ಅಗ್ರಿಕಲ್ಚರಿಸ್ಟ್ಸ್ ಸಹಕಾರಿ ಸಂಘ ಸಂಸ್ಥೆಯು ಮಂಗಳೂರು ಮತ್ತು ಇತರ ಕಡೆಗಳಲ್ಲಿ ಅಡಿಕೆ ಖರೀದಿ ಮತ್ತು ಮಾರಾಟ ವ್ಯವಹಾರ ನಡೆಸುತ್ತಿದೆ. ಆರೋಪಿ ಸತ್ಯನಾರಾಯಣ ರಾಮಚಂದ್ರ ಭಟ್‌ (55) ಎಂಬಾತ ಗುಜರಾತ್‌ನ ಅಹಮದಾಬಾದ್ ನಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, 2009ರಲ್ಲಿ ಮಂಗಳೂರು ಅಗ್ರಿಕಲ್ಚರಿಸ್ಟ್ಸ್ ಸಹಕಾರಿ ಸಂಘದಿಂದ ಆರೋಪಿಯು […]

DAKSHINA KANNADA HOME LATEST NEWS

ಎ.5 ರಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದ.ಕ ಜಿಲ್ಲಾ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಪ್ರಿಲ್ 5 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಎಪ್ರಿಲ್ 5 ರಂದು ಬೆಳಿಗ್ಗೆ 6:55 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, ಬೆಳಿಗ್ಗೆ 7:40 ಗಂಟೆಗೆ ಸಕ್ರ್ಯೂಟ್ ಹೌಸ್, 9:30- ನಗರದ ಕೊಡಿಯಾಲ್‍ಬೈಲ್ ಜೈಲ್ ರಸ್ತೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಮತ್ತು ಪಶುರೋಗ ತಪಾಸಣೆ ಮತ್ತು ಮಾಹಿತಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ, 10 – ದಕ್ಷಿಣ ಕನ್ನಡ […]

HOME LATEST NEWS UDUPI

ಕ್ರಿಶ್ಚಿಯನ್ ಯುವತಿ & ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಬಜರಂಗದಳ ಎಂಟ್ರಿ

ಮಂಗಳೂರು: ಉಡುಪಿಯಲ್ಲಿ ನಡೆದ ಕ್ರಿಶ್ಚಿಯನ್ ಯುವತಿ ಮತ್ತು ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಇದೀಗ ಹಿಂದೂ ಸಂಘಟನೆಗಳು ಎಂಟ್ರಿ ನೀಡಿವೆ. ಈ ಹೋರಾಟಕ್ಕೆ ಧುಮುಕಿದ ಬಜರಂಗದಳ ಇದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿದ್ದಾರೆ. ಜೊತೆಗೆ ಈ ಬಗ್ಗೆ ಉನ್ನತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಭಜರಂಗದಳದ ಮುಖಂಡ ಸುನಿಲ್ ಕೆ ಆರ್ ಅವರು ಪ್ರತಿಕ್ರಿಯೆ ನೀಡಿ, ವಿಶ್ವ ಹಿಂದೂ ಪರಿಷತ್ ಲವ್ ಜಿಹಾದ್ ಬಗ್ಗೆ ಜಾಗೃತಿ ಕೆಲಸ ಮಾಡುತ್ತಿದೆ.  ಆದರೆ ಜಿಹಾದಿಗಳು ತಮ್ಮ ಕೃತ್ಯ […]

DAKSHINA KANNADA HOME LATEST NEWS

ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಕರಿಮಣಿ ಎಗರಿಸಿ ಪರಾರಿ: ಗಂಭೀರ ಗಾಯ

ಮಂಗಳೂರು: ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ 70 ವರ್ಷದ ವೃದ್ಧೆಯನ್ನು ದೂಡಿಹಾಕಿ ಕರಿಮಣಿ ಸರವನ್ನು ಎಗರಿಸಿದ ಘಟನೆ ಮೂಡಬಿದ್ರೆಯ ಗುಜ್ಜರಗುಂಡಿ ಬಳಿ ಮಾ.31 ರಂದು ನಡೆದಿದೆ. ಘಟನೆಯಲ್ಲಿ ವೃದ್ದೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ವಿವರ ಇಂದಿರಾ (70) ಎಂಬುವರು ದಿನಾಂಕ 31-03-2025 ರಂದು ಕೋರಂತಬೆಟ್ಟು ಎಂಬಲ್ಲಿ ತನ್ನ ಅಳಿಯ ಭಾಸ್ಕರ ಎಂಬುವರ ಮನೆ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಹೋಗಿ ಊಟ ಮುಗಿಸಿ ವಾಪಾಸ್ ಮನೆ ಕಡೆಗೆ ಬೆಳುವಾಯಿ – ಕರಿಯನಂಗಡಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಗುಜ್ಜರಗುಂಡಿ ಎಂಬಲ್ಲಿಗೆ […]

DAKSHINA KANNADA HOME LATEST NEWS UDUPI

ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ..!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ  ಸೇರಿದಂತೆ ರಾಜ್ಯದ ವಿವಿಧೆಡೆ ನಾಳೆ (ಗುರುವಾರ) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಮತ್ತು ಗದಗ ಜಿಲ್ಲೆಯಲ್ಲಿ ಗಂಟೆಗೆ 50 […]

HOME LATEST NEWS STATE

Uber, Rapido ಸೇರಿದಂತೆ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ನಿಲ್ಲಿಸುವಂತೆ ಹೈಕೋರ್ಟ್‌ ಆದೇಶ

ಬೆಂಗಳೂರು: ಉಬರ್, ರ್ಯಾಪಿಡೋ ಸಹಿತ ಹಲವು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಹೀಗಾಗಿ ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದ್ದು, 3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಮೋಟಾರ್ ಸೈಕಲ್‌ಗಳನ್ನು […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678