DAKSHINA KANNADA
HOME
ಜೆಪ್ಪು ಮಹಾಕಾಳಿಪಡ್ಡು ರೈಲ್ವೆ ಅಂಡರ್ ಬ್ರಿಡ್ಜ್ ವಿಳಂಬ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು, : ಜೆಪ್ಪು ಮಹಾಕಾಳಿಪಡ್ಡು ರೈಲ್ವೆ ಅಂಡರ್ ಬಿಡ್ ನ್ನು 30 ದಿನದೊಳಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸದಿದ್ದರೆ ಸಾರ್ವಜನಿಕರಿಂದಲೇ ಉದ್ಘಾಟನೆ ಮಾಡಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಎಚ್ಚರಿಕೆ ನೀಡಿದ್ದಾರೆ. ಜೆಪ್ಪು ಮಹಾಕಾಳಿಪಡ್ಡು ಅಂಡರ್ ಬ್ರಿಡ್ಜ್ ಕಾಮಗಾರಿ ವಿಳಂಬವಾಗಿರುವುದನ್ನು ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಜೆಪ್ಪ ಮಹಾಕಾಳಿಪಡ್ಡು ರೈಲ್ವೆ ಅಂಡರ್ಬ್ರಿಡ್ಜ್ ಕಾಮಗಾರಿ ಯನ್ನು ಅವೈಜ್ಞಾನಿಕವಾಗಿ ನಡೆಸಿ ನಾಲ್ಕು ವರ್ಷಗಳಿಂದ ಸಾರ್ವ ಜನಿಕರನ್ನು ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದರು. ನಾಲ್ಕು ವರ್ಷಗಳ […]