Tag: ಮಂಗಳೂರು

DAKSHINA KANNADA HOME LATEST NEWS

ಎ. 11 ರಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು:   ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಎ. 11 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ  2:55 – ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:30 – ಉಳ್ಳಾಲ ದರ್ಗಾ ಆವರಣದಲ್ಲಿ  ಉಳ್ಳಾಲ ದರ್ಗಾ  ಉರೂಸ್ ಕುರಿತು ಪೂರ್ವಭಾವಿ ಸಭೆ. ಸಂಜೆ 4:30 –  ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ  ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ನೂತನ ಶವಗಾರ ಕಟ್ಟಡ,  […]

HOME LATEST NEWS NATIONAL

ಅಡುಗೆ ಅನಿಲದ ದರ ಏರಿಸಿದ ಕೇಂದ್ರ: 50 ರೂ. ಹೆಚ್ಚಳ

ಮಂಗಳೂರು: ದಿನನಿತ್ಯದ ವಸ್ತುಗಳ ದರ ಹೆಚ್ಚಳದ ನಡುವೆಯೇ ಅಡುಗೆ ಅನಿಲದ ದರವನ್ನು 50 ರೂಪಾಯಿಗೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಇದು ಸಾಮಾನ್ಯ ಸಿಲಿಂಡ‌ರ್ ಜತೆ ಉಜ್ವಲಾ ಯೋಜನೆಗೂ ಅನ್ವಯವಾಗಲಿದೆ. ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದಾರೆ. ಅಡುಗೆ ಅನಿಲದ ದರವನ್ನು ಉಜ್ವಲಾ ಯೋಜನೆ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಹೆಚ್ಚಿಸಲಾಗಿದೆ. ಹೊಸ ದರದ ಅನ್ವಯ 14.2 ಕೇಜಿ ಅಡುಗೆ ಅನಿಲದ ದರ […]

HOME LATEST NEWS NATIONAL

ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲ: ಬಿಜೆಪಿ ನಾಯಕನ ಮನೆಗೆ ಬೆಂಕಿ

ಇಂಫಾಲ್‌: ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲಿಸಿದ ಆರೋಪದ ಮೇಲೆ, ಬಿಜೆಪಿಯ ಮಣಿಪುರ ಘಟಕದ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷನ ಮನೆಗೆ ಗುಂಪೊಂದು ದಾಳಿ ಮಾಡಿ ಬೆಂಕಿ ಹಚ್ಚಿದೆ. ಬಿಜೆಪಿಯ ಮಣಿಪುರ ಘಟಕದ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಸ್ಕರ್‌ ಅಲಿ ಮನೆಗೆ ಗುಂಪೊಂದು ಭಾನುವಾರ ರಾತ್ರಿ ದಾಳಿ ಮಾಡಿ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯು ಥೌಬಾಲ್‌ ಜಿಲ್ಲೆಯ ಲಿಲೊಂಗ್ ಎಂಬಲ್ಲಿ ನಡೆದಿದೆ. ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿ ಅಸ್ಕರ್‌ ಅಲಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ […]

COMMUNITY NEWS DAKSHINA KANNADA HOME LATEST NEWS

ವಿಟ್ಲ: ಫಾತಿಮಾ ಮಾತಾ ದೇವಾಲಯದಲ್ಲಿ ಶಿಲುಬೆ ಯಾತ್ರೆ

ಬಂಟ್ವಾಳ: ತಾಲೂಕಿನ ವಿಟ್ಲದ ಪೆರುವಾಯಿಯ ಫಾತಿಮಾ ಮಾತಾ ದೇವಾಲಯದಲ್ಲಿ ಶಿಲುಬೆ ಯಾತ್ರೆಯು (ಖುರ್ಸಾವಾಟ್‌) ಇಂದು ನಡೆಯಿತು. ಮೊದಲು ನಡೆದ ಬಲಿಪೂಜೆಯನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಾಸ್ಟೆಲ್‌ ವಾರ್ಡನ್‌ ವಂ. ರೂಪೇಶ್‌ ತಾವ್ರೊ ನೆರವೇರಿಸಿದರು. ನಂತರ ಚರ್ಚ್‌ ಆವರಣದಿಂದ ನಡೆದ ಶಿಲುಬೆ ಯಾತ್ರೆಯು ಸರಿಸುಮಾರು 2 ಕೀ.ಮೀ ಸಾಗಿ ತಾಬೋರ್‌ ಪರ್ವತ (ಗುಡ್ಡ ಪ್ರದೇಶ)ದಲ್ಲಿ ಸಂಪನ್ನಗೊಂಡಿತು. ಈ ವೇಳೆ ಯೇಸು ಕ್ರಿಸ್ತರಿಗೆ ಶಿಲುಬೆಯ ಮರಣ ಶಿಕ್ಷೆ ವಿಧಿಸಿದಲ್ಲಿಂದ ಮೊದಲ್ಗೊಂಡು ಅವರು ಶಿಲುಬೆಯಲ್ಲಿ ಮರಣವನ್ನಪ್ಪಿ ಅವರ ಶರೀರವನ್ನು ಸಮಾಧಿ […]

HOME LATEST NEWS UDUPI

“ಸ್ವ ಇಚ್ಛೆಯಿಂದ ಅಕ್ರಂ ಜೊತೆ ಹೋಗಿದ್ದೇನೆ”: ಕ್ರೈಸ್ತ ಯುವತಿ- ಮುಸ್ಲಿಂ ಯುವಕನ ಪ್ರೇಮ ಪ್ರಕರಣ

ಮಂಗಳೂರು: ಕ್ರೈಸ್ತ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿದ್ದಾನೆ ಎಂದು ಯುವತಿಯ ತಾಯಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದ ಪ್ರಕರಣದಲ್ಲಿ ಹುಡುಗಿ ತನ್ನ ಪ್ರಿಯಕರನೊಂದಿಗೆ ನಿನ್ನೆ ಹೈಕೋರ್ಟ್ ಮುಂದೆ ಹಾಜರಾಗಿದ್ದಾಳೆ. ನಿನ್ನೆ ಜೀನ ಮೆರಿಲ್ ಮತ್ತು ಅಕ್ರಮ್ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನನ್ನು ಯಾರೂ ಅಪಹರಿಸಿರುವುದಿಲ್ಲ, ನಾನುಸ್ವಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತಿಳಿಸಿದ್ದಾಳೆ. ಇದೇ ವೇಳೆ ಆಕೆಯ ತಾಯಿ ಮಗಳ ಜೊತೆ ಮಾತನಾಡಬೇಕು ಎಂದು ವಿನಂತಿಸಿದಾಗ, ನ್ಯಾಯಾಧೀಶರು ತಮ್ಮ ಕೊಠಡಿಯಲ್ಲಿಯೇ […]

DAKSHINA KANNADA HOME LATEST NEWS

ಮಂಗಳೂರು: ಭಿಕ್ಷಾಟನೆ- ತಾಯಿ ಮಕ್ಕಳ ರಕ್ಷಣೆ

ಮಂಗಳೂರು : ಪುಟ್ಟ ಮಕ್ಕಳನ್ನು ಹಿಡಿದುಕೊಂಡು ನಗರದ ಲಾಲ್‍ಬಾಗ್ ಜಂಕ್ಷನ್ ಸಿಗ್ನಲ್ ಬಳಿ ಬಿಕ್ಷಾಟನೆ ನಡೆಸುತ್ತಿದ್ದ ತಾಯಿ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪತ್ತೆ ಹಚ್ಚಿ ಅವರ ಊರುಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಮಕ್ಕಳ ರಕ್ಷಣಾ ಘಟಕ ಪೋಲೀಸರ ಸಹಯೋಗದೊಂದಿಗೆ ಲಾಲ್‍ಬಾಗ್ ಸಿಗ್ನಲ್ ಬಳಿ ಭಿಕ್ಷಾಟನೆ ನಡೆಸುತ್ತಿದ್ದ 4 ಮಹಿಳೆಯರು, 4 ಪುರುಷರು, 4 ಮಕ್ಕಳನ್ನು ರಕ್ಷಣೆ ಮಾಡಿ ಅವರ ಸ್ವಂತ ಊರು ರಾಜಸ್ಥಾನಕ್ಕೆ ರೈಲಿನ ಮೂಲಕ ಕಳುಹಿಸಿಕೊಡಲಾಯಿತು. ಹೆಂಗಸರು […]

DAKSHINA KANNADA HOME LATEST NEWS

ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ & ಸಿಬ್ಬಂದಿಗೆ ಅಭಿನಂದನೆ

ಮಂಗಳೂರು: ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಿನ್ನೆ ಸಂಜೆ ನಡೆಯಿತು. ನಗರದ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮಾದಕ ವಸ್ತು ಗಳನ್ನು ಪತ್ತೆ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅತೀ ಉತ್ತಮ ಮತ್ತು ಶ್ಲಾಘನೀಯ ಕರ್ತವ್ಯ ನಿರ್ವಹಿಸಿ 2024 ನೇ ಸಾಲಿನ ಮುಖ್ಯ ಮಂತ್ರಿ ಚಿನ್ನದ ಪದಕ ಪಡೆದ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಎಸಿಪಿ ಧನ್ಯಾ ನಾಯಕ್, […]

DAKSHINA KANNADA HOME LATEST NEWS

ಹೋಟೆಲ್‌ ಮೋತಿ ಮಹಲ್ ಏಪ್ರಿಲ್‌ ಅಂತ್ಯಕ್ಕೆ ಬಂದ್…!

ಮಂಗಳೂರು: ಮಂಗಳೂರಿನ ಮೊದಲ ಬಿಝಿನೆಸ್ ಹೋಟೆಲ್ ಎಂದೇ ಖ್ಯಾತಿ ಪಡೆದಿದ್ದ ಮೋತಿ ಮಹಲ್ ಇದೀಗ ಮುಚ್ಚುವ ಹಂತಕ್ಕೆ ತಲುಪಿದ್ದು, ಎಪ್ರಿಲ್ ಅಂತ್ಯದೊಳಗೆ  ಅದರ ಭೂ ಮಾಲಕರಿಗೆ ಬಿಟ್ಟುಕೊಡಬೇಕಾಗಿದೆ. ಜಮೀನು ವಾಜ್ಯದಲ್ಲಿ ಸುಪ್ರೀಂ ಕೋರ್ಟ್‌ನ  ತೀರ್ಪಿನಂತೆ ಹೋಟೆಲ್ ಮೋತಿಮಹಲ್ ಅನ್ನು ಯಥಾ ಸ್ಥಿತಿಯಲ್ಲಿ ಜಮೀನಿನ ಮಾಲಕರಿಗೆ ಬಿಟ್ಟುಕೊಡಬೇಕಾಗಿದೆ. ಇದರೊಂದಿಗೆ 3 ಕೋಟಿ ರೂ. ಮೊತ್ತದ ಪರಿಹಾರಧನವನ್ನು ಅವರಿಗೆ ಪಾವತಿಸಬೇಕಾಗಿದೆ.   ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಪಕ್ಕದಲ್ಲಿರುವ ಹೋಟೆಲ್ ಮೋತಿಮಹಲ್ ಇರುವ ಜಮೀನಿನ ಒಡೆತನವು ಸದ್ಯ  ಜೆಪ್ಪುವಿನ ಸಂತ ಅಂಥೋನಿ ವೃದ್ಧಾಶ್ರಮಕ್ಕೆ […]

DAKSHINA KANNADA HOME LATEST NEWS

ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಕರಿಮಣಿ ಎಗರಿಸಿ ಪರಾರಿ: ಗಂಭೀರ ಗಾಯ

ಮಂಗಳೂರು: ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ 70 ವರ್ಷದ ವೃದ್ಧೆಯನ್ನು ದೂಡಿಹಾಕಿ ಕರಿಮಣಿ ಸರವನ್ನು ಎಗರಿಸಿದ ಘಟನೆ ಮೂಡಬಿದ್ರೆಯ ಗುಜ್ಜರಗುಂಡಿ ಬಳಿ ಮಾ.31 ರಂದು ನಡೆದಿದೆ. ಘಟನೆಯಲ್ಲಿ ವೃದ್ದೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ವಿವರ ಇಂದಿರಾ (70) ಎಂಬುವರು ದಿನಾಂಕ 31-03-2025 ರಂದು ಕೋರಂತಬೆಟ್ಟು ಎಂಬಲ್ಲಿ ತನ್ನ ಅಳಿಯ ಭಾಸ್ಕರ ಎಂಬುವರ ಮನೆ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಹೋಗಿ ಊಟ ಮುಗಿಸಿ ವಾಪಾಸ್ ಮನೆ ಕಡೆಗೆ ಬೆಳುವಾಯಿ – ಕರಿಯನಂಗಡಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಗುಜ್ಜರಗುಂಡಿ ಎಂಬಲ್ಲಿಗೆ […]

DAKSHINA KANNADA HOME LATEST NEWS UDUPI

ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ..!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ  ಸೇರಿದಂತೆ ರಾಜ್ಯದ ವಿವಿಧೆಡೆ ನಾಳೆ (ಗುರುವಾರ) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಮತ್ತು ಗದಗ ಜಿಲ್ಲೆಯಲ್ಲಿ ಗಂಟೆಗೆ 50 […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678