Tag: ಮಂಗಳೂರು

HOME INETRNATIONAL

UAE ಸೇರಿ ಗಲ್ಫ್‌ ರಾಷ್ಟ್ರಗಳ ಭಾರತೀಯರಿಗೆ ಟಿಕೆಟ್‌ ಆಫರ್‌ ಘೋಷಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಭಾರತ ನಡುವಿನ ವಿಮಾನ ಪ್ರಯಾಣ 2026ರಲ್ಲಿ ಇನ್ನಷ್ಟು ಕೈಗೆಟುವಂತಿದೆ. ಟಾಟಾ ಗ್ರೂಪ್‌ನ ಏರ್ ಇಂಡಿಯಾ ಎಕ್ಸ್‌ಪ್ರೆಸ್, ‘ಎಕ್ಸ್‌ಪ್ರೆಸ್ ಮೋರ್ ಸೇಲ್’ ಎಂಬ ಭಾರೀ ಟಿಕೆಟ್ ಮಾರಾಟವನ್ನು ಆರಂಭಿಸಿದೆ. ಈ ಮಾರಾಟದ ಅಡಿಯಲ್ಲಿ ಯುಎಇ–ಭಾರತ ಮಾರ್ಗಗಳಿಗೆ ಒಂದು ದಿಕ್ಕಿನ ಮೂಲ ದರ ಕೇವಲ AED 320 (ಸುಮಾರು Dh350) ರಿಂದ ಲಭ್ಯವಿದ್ದು, ಲಕ್ಷಾಂತರ ವಲಸಿಗರು, ಕುಟುಂಬಗಳು ಹಾಗೂ ಬಜೆಟ್ ಪ್ರವಾಸಿಗರಿಗೆ ಮಹತ್ತರ ಲಾಭವನ್ನು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಏರ್ ಇಂಡಿಯಾ […]

HOME LATEST NEWS NATIONAL STATE

ಗಗನದತ್ತ ಚಿನ್ನದ ಬೆಲೆ..!: 17,000 ರೂ. ಗಡಿ  ದಾಟಿದ ಚಿನ್ನ- ಬೆಳ್ಳಿಯೂ ದುಬಾರಿ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ನಿನ್ನೆ ಅಕ್ಷರಶಃ ಗಗನ ಮುಟ್ಟಿದೆ. ಇತ್ತೀಚಿನ ವರ್ಷಗಳಲ್ಲೇ ಒಂದೇ ದಿನದಲ್ಲಿ ಚಿನ್ನ ಕಂಡ ಅತಿಹೆಚ್ಚು ಏರಿಕೆ ಇದು. ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 16,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 17,000 ರೂ  ದಾಟಿ 18,000 ರೂನತ್ತ ಸಾಗುತ್ತಿದೆ. ಬೆಳ್ಳಿ ಬೆಲೆ ಇನ್ನೂ ದೊಡ್ಡ ಜಿಗಿತ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,63,950 ರುಪಾಯಿ ಇದೆ. 24 ಕ್ಯಾರಟ್​ನ […]

DAKSHINA KANNADA HOME LATEST NEWS STATE

ಎಚ್ಚರಿಕೆ: ಇಂದಿನಿಂದ ಜ.31ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಮುನ್ಸೂಚನೆ

ಮಂಗಳೂರು:- ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರು ಜಾಗರೂಕತೆ ವಹಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

DAKSHINA KANNADA HOME LATEST NEWS STATE

ಪೌರಾಯುಕ್ತೆಗೆ ಧಮ್ಕಿ ಹಾಕಿದ ಕೈ ಮುಖಂಡನಿಗೆ ಆಶ್ರಯ ನೀಡಿದ ಮೈಕಲ್ ರೇಗೊಗೆ ಜಾಮೀನು

ಬೆಂಗಳೂರು:  ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿ ಕೋರ್ಟ್​​​ ಮುಂದೆ ಹಾಜರುಪಡಿಸಿದರು. ಇದೀಗ ಕೋರ್ಟ್ ರಾಜಿವ್ ಗೌಡನನ್ನು ಜೈಲಿಗೆ ಕಳುಹಿಸಿದೆ. ಮಂಗಳೂರಿನಲ್ಲಿ ಪತ್ತೆಯಾದ ಕಾರು ಹಾಗೂ ಆರೋಪಿ ಕಾಂಗ್ರೆಸ್‌ ಮುಖಂಡ […]

DAKSHINA KANNADA HOME LATEST NEWS

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಕೋಮುದ್ವೇಷದ ಭಾಷಣ ಆರೋಪ: ಎಫ್‌ಐಆರ್‌

ಪುತ್ತೂರು: ಖಾಸಗಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋಮುಧ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ದ ಪ್ರಕರಣ ದಾಖಲಾಗಿದೆ. ಜೊತೆಗೆ ಈ ಕಾರ್ಯಕ್ರಮವನ್ನು ಪ್ರಸಾರ ಮಾಡಿದ ಕಾಲೇಜಿನ ಯೂಟ್ಯೂಬ್‌ ವಿರುದ್ಧವೂ ಪ್ರಕರಣ ದಾಖಲಾಗಿದೆ. ಪ್ರಕರಣದ ಪುತ್ತೂರಿನ ರಾಮಚಂದ್ರ ಕೆ ಎಂಬವರ ದೂರಿನಂತೆ ಜ.12 ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಆರೋಪಿತರಾದ ಡಾ.ಕಲ್ಲಡ ಪ್ರಭಾಕರ ಭಟ್ ರವರು, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ […]

DAKSHINA KANNADA HOME LATEST NEWS

ಪೆರುವಾಯಿ: ರಸ್ತೆ ಸಂಪರ್ಕವಿಲ್ಲದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್‌ ರೈ

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬದಿಯಾರು ಎಂಬಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ರಸ್ತೆ ಸಂಪರ್ಕ ಇಲ್ಲದಾಗಿದ್ದು, ಸ್ಥಳೀಯರ ಬೇಡಿಕೆಯ ಮೇರೆಗೆ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಸ್ಥಳಿಯರು ಶಾಸಕರ ಬಳಿ ತೆರಳಿ ತಮಗೆ ರಸ್ತೆ ಇಲ್ಲದಿರುವ ಬಗ್ಗೆ ಅಳಲು ತೋಡಿಕೊಂಡಿದ್ದರು. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ […]

DAKSHINA KANNADA HOME LATEST NEWS

ಮಂಗಳೂರಿನ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಬೆಂಕಿ: ಅಪಾರ ನಷ್ಟ

ಮಂಗಳೂರು: ನಗರದ ಹೊಯ್ಗೆಬಜಾರ್‌ನಲ್ಲಿರುವ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಮಂಗಳವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಹೆಂಚುಗಳು ಹಾಗೂ ಇಟ್ಟಿಗೆಗಳು ಹಾನಿಗೊಳಗಾಗಿವೆ. ಕಟ್ಟಡವೂ ಭಾಗಶಃ ಸುಟ್ಟುಹೋಗಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದವು. ಬೆಂಕಿ ಭಾರಿ ಪ್ರಮಾಣದಲ್ಲಿ ವ್ಯಾಪಿಸಿದ್ದರಿಂದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಎರಡು, ಕದ್ರಿ ಅಗ್ನಿಶಾಮಕ ಠಾಣೆ ಹಾಗೂ ಎಂಸಿಎಫ್‌ನ ತಲಾ ಒಂದು ಅಗ್ನಿಶಾಮಕ ವಾಹನ ಬಳಸಿ ಬೆಂಕಿಯನ್ನು ನಂದಿಸಲಾಯಿತು. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂದು ಗೊತ್ತಾಗಿಲ್ಲ. ಕಾರ್ಖಾನೆಯಲ್ಲಿ ದಾಸ್ತಾನಿದ್ದ ಹೆಂಚುಗಳು ಹಾಗೂ […]

DAKSHINA KANNADA HOME LATEST NEWS

ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್‌ಗೆ 2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿ

ಮಂಗಳೂರು: 2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ (ಎಮ್. ಪೆಟ್ರಿಕ್) ಇವರನ್ನು ಆಯ್ಕೆ ಮಾಡಲಾಗಿದೆ. ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ ಈ ಬಗ್ಗೆ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೊಂಕಣಿ ಲೇಖಕ್ ಸಂಘ್ ಕರ್ನಾಟಕ ಇದರ ಸಂಚಾಲಕ ರಿಚರ್ಡ್ ಮೊರಾಸ್ ಅವರು, ಈ ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.  ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಫೆಬ್ರವರಿ 07, 2026ನೇ […]

DAKSHINA KANNADA HOME LATEST NEWS

ಶೇರ್ ಮಾರ್ಕೆಟಿಂಗ್ ಹೆಸರಲ್ಲಿ ಮಂಗಳೂರ ವ್ಯಕ್ತಿಗೆ ರೂ. 1,38,20,060 ದೋಖಾ

ಮಂಗಳೂರು: ಆನ್ ಲೈನ್ ಶೇರು ಮಾರುಕಟ್ಟೆಯ ಬಗ್ಗೆ ವಾಟ್ಸಾಪ್ ಮೇಸೆಜ್ ಗಳನ್ನು ನಂಬಿ ವ್ಯಕ್ತಿಯೋರ್ವರು ರೂ 1,38,20,060/- ಹಣ ಕಳೆದುಕೊಂಡ ಬಗ್ಗೆ ಮಂಗಳೂರು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಮಂಗಳೂರಿನ ವ್ಯಕ್ತಿಯೋರ್ವರ ಮೊಬೈಲಿಗೆ ರಿಶಿತಾ ಎಂಬ ಅಪರಿಚಿತ ವ್ಯಕ್ತಿ 9205298139 ನೇ ವಾಟ್ಸಾಫ್ ನಂಬ್ರದಿಂದ ಮಂಗಳೂರ ವ್ಯಕ್ತಿಯ ಕಂಪನಿಯ Carpets & Home decorative items ಬೇಕೆಂದು ವಾಟ್ಸಪ್ ಮೇಸೆಜ್ ಮಾಡಿದ್ದಾರೆ.  ಅದರಂತೆ ಈ ವ್ಯಕ್ತಿ ತನ್ನ ಕಂಪನಿಯ Carpets & Home […]

DAKSHINA KANNADA HOME LATEST NEWS

ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರಂಟ್ ಜಾರಿ ಸಿಬ್ಬಂದಿ ಬಂಧಿಸಿದ್ದಾರೆ. ತೊಕ್ಕೊಟ್ಟು ನಿವಾಸಿ ನವೀನ್ ಸಿಕ್ವೇರಾ (52)ಬಂಧಿತ ಆರೋಪಿ. 2011–12ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಸಂಖ್ಯೆ 195/2011, ಕಲಂ 392 ಐಪಿಸಿ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015ರಲ್ಲಿ ಆರೋಪಿಗೆ ಮೂರು ವರ್ಷಗಳ ಕಠಿಣ ಸೆರೆವಾಸ ಮತ್ತು 5,000 ರೂ. […]