Tag: ಮಂಗಳೂರು

DAKSHINA KANNADA HOME LATEST NEWS

ಮಂಗಳೂರು: ಬಾಲ ಯೇಸುವಿನ ವಾರ್ಷಿಕ ಮಹೋತ್ಸವ- ಹೊರೆ ಕಾಣಿಕೆ ಮೆರವಣಿಗೆ

ಮಂಗಳೂರು: ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜ 3 ರಂದು , ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ವಂ. ವಿಜಯ್ ಮೊಂತೆರೋ, (ಸಹಾಯಕ ಧರ್ಮಗುರು , ಕೊರ್ಡೆಲ್ ಚರ್ಚ್) ಆಶೀರ್ವಾದ ನೀಡಿ, ಶ್ರೀಮತಿ ರೂತ್ ಕ್ಯಾಸ್ಟೆಲಿನೊ, (ಉಪಾಧ್ಯಕ್ಷೆ, ಕೊರ್ಡೆಲ್ ಚರ್ಚ್) ಮೆರವಣಿಗೆಗೆ ಧ್ವಜ ಹಾರಿಸಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಸಾಮಾಜಿಕ […]

DAKSHINA KANNADA HISTORY HOME LATEST NEWS

ನಿಮ್ಮ ಪರ ಪ್ರಚಾರಕ್ಕೆ ರೆಡಿ: ಶಾಸಕ ಅಶೋಕ್ ರೈಗೆ ಪೆರುವಾಯಿ BJP ಕಾರ್ಯಕರ್ತರ ಭರವಸೆ..!

ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆ ನೀಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ […]

DAKSHINA KANNADA HOME LATEST NEWS

ಕಾರಿನ ಟೈಯರ್ ಬ್ಲಾಸ್ಟ್: ಅದೃಷ್ಟವಶಾತ್ ಪಾರಾದ ಬೋಂದೆಲ್ ಚರ್ಚ್ ಪಾದ್ರಿ

ಮಂಗಳೂರು: ಕಾರಿನ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಎಸೆಯಲ್ಪಟ್ಟ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಾವೂರು ಬಳಿಯ ಮರಕಡದಲ್ಲಿ ಜನವರಿ 1 ರಂದು ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಬೋಂದೆಲ್ ಚರ್ಚ್ ಪಾದ್ರಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಪಾದ್ರಿಯಾಗಿರುವ ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಅಪಾಯದಿಂದ ಪಾರಾದವರು.‌ ಜನವರಿ 1ರಂದು ಕಿನ್ನಿಗೋಳಿಯ ನೀರುಡೆಯಲ್ಲಿರುವ ತಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮಧ್ಯಾಹ್ನ […]

DAKSHINA KANNADA HOME LATEST NEWS

ಯಾರೂ ಹಸಿವಿನಿಂದ ಮಲಗಬಾರದು, ಮಲಗಿದರೆ ಅದು ಉಳ್ಳವರಿಗೆ ಅವಮಾನ: ರೊನಾಲ್ಡ್ ಮಾರ್ಟಿಸ್

ಮಂಗಳೂರು: ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬೈಯ ʼಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್‌ʼನ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್ ಹೇಳಿದರು. ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಫಿಸಿಯೋಥೆರಪಿ ಸೆಂಟರ್ ಬಳಿ ಶನಿವಾರ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜತೆಗಾರರಿಗೆ ರಾತ್ರಿಯ ಊಟ ನೀಡುವ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಕತ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. […]

DAKSHINA KANNADA HOME LATEST NEWS

ದೇಶವ್ಯಾಪ್ತಿ ಕ್ರೈಸ್ತರ ಮೇಲೆ ನಡೆದ ದಾಳಿ ಖಂಡಿಸಿ ಮಂಗಳೂರಿನಲ್ಲಿ ಮೌನ ಪ್ರತಿಭಟನೆ

ಮಂಗಳೂರು: ಕ್ರಿಸ್‌ಮಸ್ ಹಬ್ಬದ ವೇಳೆ ದೇಶವ್ಯಾಪ್ತಿ ಕ್ರೈಸ್ತರ ಮೇಲೆ ನಡೆದ ದಾಳಿಗಳನ್ನು ಖಂಡಿಸಿ, ಸಂತ ಸೆಬಾಸ್ಟಿಯನ್ ಚರ್ಚ್, ಬೆಂದೂರು, ಮಂಗಳೂರು ವತಿಯಿಂದ ಜ.3ರಂದು ಸಂಜೆ 6 ಗಂಟೆಗೆ ಚರ್ಚಿನ ಮುಂಭಾಗದಲ್ಲಿ ಮೌನ ಪ್ರತಿಭಟನೆ ಆಯೋಜಿಸಲಾಯಿತು. ಈ ಮೌನ ಪ್ರತಿಭಟನೆಯಲ್ಲಿ ಚರ್ಚಿನ ಧರ್ಮಗುರುಗಳಾದ ವಂ. ವಾಲ್ಟರ್ ಡಿಸೋಜಾ, ಸಹಾಯಕ ಧರ್ಮಗುರುಗಳಾದ ವಂ. ವಿವೇಕ್ ಪಿಂಟೋ ಹಾಗೂ ವಂ. ಓಜ್ಮೊಂಡ್ ಡಿಸೋಜಾ, ವಂ. ಅರುಣ್ ಲೋಬೊ (ಪ್ರಾಂಶುಪಾಲರು), ಉಪಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ವಂ. ವಾಲ್ಟರ್ ಡಿಸೋಜಾ […]

COMMUNITY NEWS HOME

ವಲ್ಲಿ ವಗ್ಗ ಅವರಿಗೆ ಕವಿತಾ ಟ್ರಸ್ಟ್‌ನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ

ಮಂಗಳೂರು:  ಕವಿತಾ ಟ್ರಸ್ಟ್ ನೀಡುವ 2025ನೇ ಸಾಲಿನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ, ವಲ್ಲಿ ವಗ್ಗ ಎಂಬ ಕಾವ್ಯನಾಮದಲ್ಲಿ ಬರೆಯುವ ವಲೇರಿಯನ್ ಡಿ’ಸೋಜಾ ಅವರಿಗೆ ನೀಡಲಾಗಿದೆ. ಈ ಪ್ರಶಸ್ತಿಯ ಮೌಲ್ಯ ರೂ. 25,000, ಸ್ಮರಣಿಕೆ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ. ಜನವರಿ 11, 2026 ರಂದು ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ನಲ್ಲಿರುವ ಮದರ್ ತೆರೇಸಾ ಪೀಸ್ ಪಾರ್ಕ್‌ನಲ್ಲಿ ನಡೆಯುವ 20 ನೇ ಕವಿತಾ ಫೆಸ್ತ್ ಉತ್ಸವದ ಸಂದರ್ಭದಲ್ಲಿ ಪ್ರಸಿದ್ಧ ಕೊಂಕಣಿ ಬರಹಗಾರ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ […]

DAKSHINA KANNADA HOME

ತಣ್ಣೀರುಬಾವಿ ಬೀಚ್‌ನಲ್ಲಿ ಇಂದು-ನಾಳೆ ಮ್ಯೂಸಿಕ್ ಫೆಸ್ಟಿವಲ್: ಪೊಲೀಸರಿಂದ ಸಂಚಾರಿ ಸಲಹೆ

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್‌ನಲ್ಲಿ  ಜ.3 ಹಾಗೂ 4 ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿರುತ್ತದೆ. ಸದರಿ ಕಾರ್ಯಕ್ರಮಗಳಿಗೆ  ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವವರಿದ್ದು, ಈ ಸಮಯ ಕೊಟ್ಟಾರಚೌಕಿ – ಪಣಂಬೂರು ರಾಷ್ಟ್ರೀಯ ಹೆದ್ದಾರಿ ಮತ್ತು ತಣ್ಣೀರುಬಾವಿ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇರುತ್ತದೆ. ಮೇಲಿನ ಕಾರ್ಯಕ್ರಮಗಳು ನಡೆಯುವ […]

COMMUNITY NEWS DAKSHINA KANNADA HOME

ಮೊಗರ್ನಾಡು ದೇವ ಮಾತಾ ದೇವಾಲಯದ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆ

ವಿಟ್ಲ: ಬಂಟ್ವಾಳ ತಾಲೂಕಿನ ಅಮ್ಟೂರು ಕರಿಂಗಾಣ ದೇವ ಮಾತಾ ದೇವಾಲಯ ಮೊಗರ್ನಾಡು ಇದರ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆಯ ಸಮಾರೋಪ ಸಮಾರಂಭ ನಡೆಯಿತು.‌ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆಯ ಅಂಗವಾಗಿ ‘ತ್ರಿದುಮ್’ ಸಂಭ್ರಮಾಚರಣೆಯನ್ನು ವಿಜ್ರಂಭಣೆಯನ್ನು ಆಚರಿಸಲಾಯಿತು. ಡಿಸೆಂಬರ್ 29ರಂದು ಜ್ಯುಬಿಲಿ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ದಾನವನ್ನು ನೀಡಿದ ದಾನಿಗಳಿಗೆ ಮತ್ತು ದೇವಾಲಯದ ಭಕ್ತಾಭಿಮಾನಿಗಳಿಗೆ ವಿಶೇಷ ಬಲಿ ಪೂಜೆಯನ್ನು ಏರ್ಪಡಿಸಲಾಗಿತ್ತು. ನಂತೂರು ಮಂಗಳ ಜ್ಯೋತಿಯ ನಿರ್ದೇಶಕರರಾದ ವಂದನೀಯ ಫಾದರ್ ರೋಹಿತ್ ಡಿಕೊಸ್ತ ದಿವ್ಯ ಬಲಿಪೂಜೆಯನ್ನು ನೇರವೇರಿಸಿದರು. ಡಿಸೆಂಬರ್ 30ರಂದು ಪೂರ್ವಜರ […]

DAKSHINA KANNADA HOME LATEST NEWS STATE

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ

ಮಂಗಳೂರು: ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವಕರಾಗಿದ್ದ ವಿನಯ ಹೆಗ್ಡೆ ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸಹಿತ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರರಾಗಿದ್ದ ವಿನಯ‌ ಹೆಗ್ಡೆ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದವರು. […]

DAKSHINA KANNADA HOME LATEST NEWS STATE

ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ರೈಲ್ವೇ ಮಾರ್ಗದ ವಿದ್ಯುದೀಕರಣ ಯಶಸ್ವಿ

ಮಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು ಆಗಿದೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ ಅನುಕೂಲ […]