COMMUNITY NEWS
DAKSHINA KANNADA
HOME
*ಯೇಸು ಕ್ರಿಸ್ತರು ತ್ಯಾಗದಿಂದ ಇಂದು ಪವಿತ್ರಸಭೆ ಜೀವಂತವಾಗಿದೆ. ಬರೇಲಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅ। ವಂ। ಇನ್ನೇಶಿಯಸ್ ಡಿ’ಸೋಜಾ*
ಮಂಗಳೂರು ಜ. 5: ದೇವರು ಮನುಕುಲವನ್ನು ಅತೀವವಾಗಿ ಪ್ರೀತಿಸುತ್ತಾರೆ. ದೇವರು ಹಾಗೂ ಮನುಜನ ನಡುವಿನ ಸಂಬಂಧ ಪವಿತ್ರವಾಗಿದೆ. ದೇವರು ಆರಂಭದಿಂದಲೂ ಮನುಕುಲದಲ್ಲಿ ತಮ್ಮ ವಿಶ್ವಾಸವನ್ನು ಉಳಿಸಿಕೊಂಡಿದ್ದಾರೆ. ಅವರ ಪುತ್ರ ಯೇಸು ಕ್ರಿಸ್ತರನ್ನು ಜಗತ್ತಿಗೆ ಸಮರ್ಪಿಸಿದರು. ಅವರ ಮೂಲಕ ನಮ್ಮನ್ನು ದೇವರೆಡೆಗೆ ಕೊಂಡೊಯ್ಯಲು ಮಾರ್ಗವನ್ನು ಸಿದ್ದಗೊಳಿಸಿದ್ದಾರೆ ಎಂದು ಬರೇಲಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅ। ವಂ। ಇನ್ನೇಶಿಯಸ್ ಡಿ’ಸೋಜಾ ಹೇಳಿದರು. ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ಸೋಮವಾರ ಆರಂಭಗೊಂಡ ಮೊದಲ ದಿನದ ನೊವೆನಾ ಪ್ರಾರ್ಥನೆಯಲ್ಲಿ ಭಾಗವಹಿಸಿ ಬಲಿಪೂಜೆ ನೆರವೇರಿಸಿ ಆಶೀರ್ವಚನ ನೀಡಿ […]


