• Home  
  • ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ವಸಂತ ಪೂಜಾರಿ ನೇಮಕ
- LATEST NEWS

ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ವಸಂತ ಪೂಜಾರಿ ನೇಮಕ

ಮಂಗಳೂರು: ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ “ಜಿಲ್ಲಾ ಕಾರ್ಯಾಧ್ಯಕ್ಷ”ರನ್ನಾಗಿ ಮಂಗಳೂರಿನ ಜಲ್ಲಿಗುಡ್ಡ ನಿವಾಸಿ ಶ್ರೀ ವಸಂತ ಪೂಜಾರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಪಕ್ಷದ ಪ್ರಧಾನ ಕಚೇರಿ ‘ಜೆ.ಪಿ ಭವನ’ದಿಂದ ಅಧಿಕೃತವಾಗಿ ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ. ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಜಿಲ್ಲೆಯ ಎಲ್ಲಾ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ […]

Share News

ಮಂಗಳೂರು: ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ “ಜಿಲ್ಲಾ ಕಾರ್ಯಾಧ್ಯಕ್ಷ”ರನ್ನಾಗಿ ಮಂಗಳೂರಿನ ಜಲ್ಲಿಗುಡ್ಡ ನಿವಾಸಿ ಶ್ರೀ ವಸಂತ ಪೂಜಾರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಪಕ್ಷದ ಪ್ರಧಾನ ಕಚೇರಿ ‘ಜೆ.ಪಿ ಭವನ’ದಿಂದ ಅಧಿಕೃತವಾಗಿ ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.

ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಜಿಲ್ಲೆಯ ಎಲ್ಲಾ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬಲವರ್ಧನೆಗೊಳಿಸುವ ಮತ್ತು ಸಂಘಟಿಸುವ ಗುರುತರ ಜವಾಬ್ದಾರಿಯನ್ನು ಶ್ರೀ ವಸಂತ ಪೂಜಾರಿ ಅವರಿಗೆ ವಹಿಸಲಾಗಿದ್ದು, ಪಕ್ಷದ ವತಿಯಿಂದ ಅವರಿಗೆ ಶುಭ ಹಾರೈಸಲಾಗಿದೆ.

Share News