ವಿಟ್ಲ ಸೆ. 16: ಅಳಿಕೆ ಗ್ರಾಮದ ಎರುಂಬು ಮೆಣಸಿನಗಂಡಿಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಗಳನ್ನುತಪಾಸಣೆ ನಡೆಸಿದ ಪೊಲೀಸರಿಗೆ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ವಿಚಾರ ತಿಳಿದು ಬಂದಿದ್ದು, ಮೂವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಕ್ ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿ ಸನತ್ ಕುಮಾರ್ (23), ಪೊನ್ನೊಟ್ಟು ನಿವಾಸಿ ಮಹಮ್ಮದ್ రాయిరో
(23) ಮತ್ತು ಮಂಗಳಪದವು ನಿವಾಸಿ ಚೇತನ್ (23) ಬಂಧಿತರು. ಆರೋಪಿಗಳಿಂದ 6.27 ಗ್ರಾಂ ತೂಕದ ಗಾಂಜಾ, ಮೊಬೈಲ್, ಒಂದು 3 ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಸೆ. 15ರಂದು ವಿಟ್ಲ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಗಸ್ತಿನಲ್ಲಿದ್ದ ಸಂದರ್ಭಬಂದ ಈ ಯುವಕರು ಗಾಂಜಾವನ್ನು ಬೈಕಿನಲ್ಲಿ ಇರಿಸಿಕೊಂಡು ಗ್ರಾಹಕರಿಗೆ ಅಕ್ರಮವಾಗಿ ಮಾರಾಟ ಮಾಡಲು ತಂದಿರುವುದಾಗಿ ಒಪ್ಪಿಕೊಂಡಿದ್ದಾರೆ.