• Home  
  • ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ
- DAKSHINA KANNADA

ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ

ವಿಟ್ಲ: ಹಸಿರೇ ಉಸಿರು ಎಂಬ ಧ್ಯೇಯದೊಂದಿಗೆ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ವಿಟ್ಲ ವಲಯ ಅರಣ್ಯಾಧಿಕಾರಿ ಶ್ರೀಯುತ ವೀರಣ್ಣ ಇವರು ಕಾರ್ಯಕ್ರಮವನ್ನು ಗಿಡ ನೆಟ್ಟು ಅದಕ್ಕೆ ನೀರುಣಿಸುವ ಮೂಲಕ ವಿಭಿನ್ನ ಶೈಲಿಯಲ್ಲಿ ಉದ್ಘಾಟಿಸಿ ವನಮಹೋತ್ಸವದ ಮಹತ್ವದ ಬಗ್ಗೆ ತಿಳಿಸಿದರು.


ಶಾಲಾ ಸಂಚಾಲಕರಾದ ಫಾ. ಐವನ್ ಮೈಕೆಲ್ ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಟ್ಲ ವಲಯದ ಅರಣ್ಯ ಗಸ್ತು ಅಧಿಕಾರಿ ಸತೀಶ್‌ ಡಿ ಸೋಜಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರು ಫಾ ಅಮಿತ್ ಪ್ರಕಾಶ್ ರೋಡ್ರಿಗಸ್ ಮತ್ತು ಮುಖ್ಯ ಶಿಕ್ಷಕಿ ಸಿಸ್ಟರ್ ಮರೀನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ನೃತ್ಯ,ಹಾಡುಗಳೊಂದಿಗಿನ ಕಾರ್ಯಕ್ರಮದಲ್ಲಿ ಸ್ಕೌಟ್ , ಗೈಡ್ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು. ಕ್ಲಾರಿಸ್ ವನಮಹೋತ್ಸವದ ಮಾಹಿತಿ ನೀಡಿದರು. ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಭಕ್ತಿ ಕೆ ಸ್ವಾಗತಿಸಿ, ಜನನಿ ಎಸ್ ವಂದಿಸಿದರು. ಫಾತಿಮಾ ಅಸ್ನ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮವನ್ನು ದೈಹಿಕ ಶಿಕ್ಷಕರುಗಳಾದ ವಿದ್ಯಾ ಬಿ ಹಾಗೂ ಸತ್ಯನಾರಾಯಣ ರೈ  ಸಂಯೋಜಿಸಿದರು.

Share News

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678