ಮಂಗಳೂರು: ಮತಗಳ್ಳತನ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಪ್ರತಿಭಟನಾ ಸಭೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ವೇತೃತ್ವದಲ್ಲಿ ನಡೆಯಿತು.
ಮಂಗಳೂರಿನ ನವಭಾರತ್ ಸರ್ಕಲ್ ನಿಂದ ಲಾಲ್ಭಾಗ್ ವರೆಗೆ ನಡೆದ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಮತಗಳ್ಳತನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ರಮಾನಾಥ ರೈ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆಆರ್ ಲೋಬೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮುಖಂಡರಾದ ಪದ್ಮರಾಜ್ ಪೂಜಾರಿ, ಶಾಹುಲ್ ಹಮೀದ್ ಕೆಕೆ, ಕುಮಾರಿ ಅಪ್ಪಿ, ಪ್ರವೀನ್ ಚಂದ್ರ ಆಳ್ವ, ನವೀನ್ ಡಿಸೋಜ, ನೂರುದ್ದೀನ್ ಸಾಲ್ಮರ, ದಿನೇಶ್ ಮೂಳೂರು, ಯುವ ಕಾಂಗ್ರೆಸ್ ರಾಜ್ಯ ಪದಾಧಿಕಾರಿಗಳಾದ ಕಲ್ಯಾಣ್ ತೇಜಸ್, ಅನಿಲ್ ಚಿಮ್ಮಯ, ಶ್ರೀಪ್ರಸಾದ್ ಪಾಣಾಜೆ, ಅಭಿನಂದನ್ ಹರೀಶ್, ಅಂಜುಮ್ ಸುರಯ್ಯ, ಜಿಲ್ಲಾ ಉಪಾಧ್ಯಕ್ಷರಾದ ಮೊಹಮ್ಮದ್ ಬಶೀರ್, ಸುನಿತ್ ಡೇಸಾ ಉಪಸ್ಥಿತರಿದ್ದರು.